LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅವಳಿ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಕಾರ್ಯಾಚರಣೆ - 44 ಮಕ್ಕಳ ರಕ್ಷಣೆ

ಹುಬ್ಬಳ್ಳಿ - ಧಾರವಾಡ . ಹುಬ್ಬಳ್ಳಿ ಧಾರವಾಡದ ಮಾರುಕಟ್ಟೆ ಪ್ರದೇಶಗಳಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಬೇರೆ ಬೇರೆ ಕಡೆಗಳಲ್ಲಿ ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ 44 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಗೊಳಿಸುವ ಉದ್ದೇಶದಿಂದ ಜಿಲ್ಲಾಡಳಿತ ಧಾರವಾಡ, ರಾಷ್ಟ್ರೀಯ ಬಾಲ  ಯೋಜನಾ ಸಂಘ ಧಾರವಾಡ,ಕಾರ್ಮಿಕ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಹುಬ್ಬಳ್ಳಿ ಮತ್ತು  ಧಾರವಾಡ ನಗರದ ಮಾರುಕಟ್ಟೆ ಪ್ರದೇಶಗಳಲ್ಲಿ ಏಕಕಾಲದಲ್ಲಿ ಹಠಾತ್ ದಾಳಿ ಕೈಗೊಳ್ಳಲಾಯಿತು.

ದುರ್ಗದ ಬೈಲ್, ಶಾ ಬಜಾರ್, ಮೂರುಸಾವಿರ ಮಠದ ಪ್ರದೇಶ ಹಾಗೂ ಧಾರವಾಡದ ನೆಹರೂ ಮಾರ್ಕೇಟ್, ಸಿಬಿಟಿ, ಸೂಪರ ಮಾರ್ಕೇಟ್ ಸೇರಿದಂತೆ ವಿವಿಧ ಕಡೆ ನಡೆಸಲಾದ ಜಾಗೃತಿ ಮತ್ತು ದಾಳಿಯಲ್ಲಿ ಹೂವು, ಹಣ್ಣು, ತರಕಾರಿ ಮಾರಾಟ ಸೇರಿದಂತೆ ಸ್ವಂತ ಉದ್ಯೋಗ ಹಾಗೂ ಪಾಲಕರಿಗೆ ಸಹಾಯ ಮಾಡುತ್ತಿದ್ದ ಮಕ್ಕಳನ್ನು ರಕ್ಷಿಸಿ ಪಾಲಕರಿಗೆ ಕಾನೂನಾತ್ಮಕ ತಿಳುವಳಿಕೆ ಮೂಡಿಸಿ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಲಾಯಿತು. 

ಅವಳಿನಗರದಲ್ಲಿ ನಡೆದ ಹಠಾತ್ ದಾಳಿಗಳಲ್ಲಿ ಸುಮಾರು 44 ಮಕ್ಕಳನ್ನು  ಕೆಲಸದಿಂದ ಮುಕ್ತಿಗೊಳಿಸಲಾಗಿದೆ, 4 ಜನ ಕಿಶೋರ ಕಾರ್ಮಿಕರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲಾಗಿದೆ. ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ 20 ಹಾಗೂ ಧಾರವಾಡದಲ್ಲಿ 24 ಮಕ್ಕಳನ್ನು ಕೆಲಸದಿಂದ‌ ಮುಕ್ತಿಗೊಳಿಸಲಾಯಿತು.

ಎನ್.ಸಿ.ಎಲ್.ಪಿ ನಿರ್ದೇಶಕ ಬಾಳಗೌಡ ಪಾಟೀಲ, ಕಾರ್ಮಿಕ ಅಧಿಕಾರಿ ಮಾರಿಕಾಂಬಾ ಹುಲಕೋಟಿ, ಮಲ್ಲಿಕಾರ್ಜುನ ಜೋಗೂರ, ಅಕ್ಬರ ಅಲ್ಲಾಪೂರ, ಶಮಿ ಹೆಚ್, ಸಂಗೀತಾ ಬೆನಕನಕೊಪ್ಪ, ಮೀನಾಕ್ಷಿ ಶಿಂದಿಹಟ್ಟಿ, ವಿಜಯಕುಮಾರ ಕಡಕೋಳ, ಡಾ ಕಮಲಾ ಬೈಲೂರ, ಸಂಕಲ್ಪ ಸಂಸ್ಥೆಯ ಪ್ರಕಾಶ ಹೂಗಾರ, ಮಕ್ಕಳ ಸಹಾಯವಾಣಿಯ ಚಂದ್ರಶೇಖರ ರಾಹುತರ, ಆನಂದ ಸವಣೂರ, ಉಮಾ ರೊಟ್ಟಿಗವಾಡ, ಮಕ್ಕಳ ರಕ್ಷಣಾ ಘಟಕದ ಕರೆಪ್ಪ ಕೌಜಲಗಿ, ಪ್ರಭಾಕರ ಜಿ, ಮಮ್ಮದಲಿ, ಎಸ್. ಎಂ ಮುಲ್ಲಾ ಸೇರಿದಂತೆ ಪೋಲಿಸ್ ಸಿಬ್ಬಂದಿ ಗಳು ಇದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....