LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವಿನಯ ಕುಲಕರ್ಣಿ ಸೋದರ ಮಾವ ಸಿಬಿಐ ವಶಕ್ಕೇ – ಕೋವಿಡ್ ಪರೀಕ್ಷೆ ನಂತರ ನ್ಯಾಯಾಧೀಶರ ಎದುರು ಹಾಜರು

ಧಾರವಾಡ -

ಯೊಗೀಶಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಅಧಿಕಾರಿಗಳು ಮತ್ತಷ್ಟು ಹೆಚ್ಚು ಚುರುಕುಗೊಳಿಸಿದ್ದಾರೆ. ಈ ಒಂದು ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಜೈಲು ಸೇರುತ್ತಿದ್ದಂತೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು ಪ್ರಕರಣದಲ್ಲಿ ಮತ್ತೊಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು ಸಿಬಿಐ ಅಧಿಕಾರಿಗಳು ಕೊನೆಗೂ ವಶಕ್ಕೆ ತಗೆದುಕೊಂಡಿದ್ದಾರೆ.

ಕಳೆದ ಒಂದೂವರೆ ತಿಂಗಳಿನಿಂದ ನಿರಂತರವಾಗಿ ಇವರನ್ನು ಬಿಟ್ಟು ಬಿಡದೇ ವಿಚಾರಣೆ ಮಾಡುತ್ತಿದ್ದ ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೇ ತಗೆದುಕೊಂಡಿದ್ದಾರೆ. ವಶಕ್ಕೇ ತಗೆದುಕೊಂಡು ತಡರಾತ್ರಿ ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದರು.

ಬೆಳಿಗ್ಗೆ ಇವರಿಗೆ ಕೋವಿಡ್ ಟೆಸ್ಟ್ ಮಾಡಿಸಿದ ನಂತರ ವರದಿ ಬಂದ ಮೇಲೆ ಇವರನ್ನು ಸಿಬಿಐ ನ್ಯಾಯಾಲಾಯದ ನ್ಯಾಯಾಧೀಶರ ಎದುರು ಸಿಬಿಐ ಅಧಿಕಾರಿಗಳು ಹಾಜರು ಮಾಡಲಿದ್ದಾರೆ. ಚಂದ್ರಶೇಖರ್ ಇಂಡಿ ಮತ್ತು ಇನ್ನೊಬ್ಬರನ್ನು ಸಿಬಿಐ ಅಧಿಕಾರಿಗಳು ವಶಕ್ಕೇ ತಗೆದುಕೊಂಡಿದ್ದಾರೆ

ಚಂದ್ರಶೇಖರ ಇಂಡಿ

ಮಾಹಿತಿ ಬರುತ್ತಿದ್ದಂತೆ ಇತ್ತ ಉಪನಗರ ಇನಸ್ಪೇಕ್ಟರ್ ಪ್ರಮೋದ ಯಲಿಗಾರ ಠಾಣೆ ಎದುರು ಬ್ಯಾರಿಕೇಡ್ ಹಾಕಿದರು.ಪೊಲೀಸ್ ಠಾಣೆ ಮುಂದೆ ಸಾಕಷ್ಟು ಪ್ರಮಾಣದಲ್ಲಿ ಬ್ಯಾರಿಕೇಡ್ ಹಾಕಿ ಭದ್ರತೆಯನ್ನು ಇನಸ್ಪೇಕ್ಟರ್ ಪ್ರಮೋದ ಯಲಿಗಾರ ಮತ್ತು ಪಿಎಸೈ ಶ್ರೀಮಂತ ಹುಣಸಿಕಟ್ಟಿ ಮತ್ತು ಸಿಬ್ಬಂದಿ ವರ್ಗದವರು ಭದ್ರತೆಯ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಬೆಳಿಗ್ಗೆ ವಿನಯ ಕುಲಕರ್ಣಿ ಸೋದರ ಮಾವ ಇವರಿಗೆ ಕೋವಿಡ್ ಟೆಸ್ಟ್ ನ್ನು ಸಿಬಿಐ ಅಧಿಕಾರಿಗಳು ಮಾಡಿಸಲಿದ್ದಾರಂತೆ ಇನ್ನೂ ಇನ್ನೊರ್ವನನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ತಗೆದುಕೊಂಡಿದ್ದು ನಾಳೆ ಅವನನ್ನು ಕರೆತರುವ ಸಾಧ್ಯತೆ ಇದೆ. ಒಟ್ಟಾರೆ ಮಾಜಿ ಸಚಿವ ವಿನಯ ಕುಲಕರ್ಣಿ ಜೈಲು ಸೇರಿದ್ರು ಅವರ ಸಂಬಂಧಿಕರಿಗೆ ಮಾತ್ರ ಯೊಗೀಶಗೌಡ ಕೊಲೆ ಸುತ್ತಿಕೊಳ್ಳುತ್ತಿದ್ದು ಇನ್ನೂ ಯಾರು ಯಾರಿಗೂ ಸುತ್ತಿಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ,

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....