LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯಾಧ್ಯಂತ ಸಡಗರ ಸಂಭ್ರಮದಿಂದ ಕಂಡು ಬಂದ ಶಾಲಾ ಪ್ರಾರಂಭೋತ್ಸವ - ಕರಡಿಗುಡ್ಡದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಿಶೇಷವಾಗಿ ಕಂಡು ಬಂದ ಕಾರ್ಯಕ್ರಮ.....

ಧಾರವಾಡ -

ಕರ್ನಾಟಕ ಪಬ್ಲಿಕ್ ಸ್ಕೂಲ್, ಕರಡಿಗುಡ್ಡ ಶಾಲೆ ಯಲ್ಲಿ ಸಂಭ್ರಮ ದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು ಹೌದು 2024-25 ನೆಯ ಸಾಲಿನ ಜಿಲ್ಲಾಮಟ್ಟದ ಶಾಲಾ ಪ್ರಾರಂ ಭೋತ್ಸವ ಕಾರ್ಯಕ್ರಮವು ಧಾರವಾಡ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಕರಡಿ ಗುಡ್ಡದಲ್ಲಿ ಮೇ 31, 2024 ರಂದು ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವ ಹಣಾಧಿಕಾರಿಗಳಾದ ಸ್ವರೂಪಾ.ಟಿ.ಕೆ ಯವರು ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕಗಳನ್ನು ವಿತರಿಸಿ ವಿದ್ಯಾರ್ಥಿ ಜೀವನದ ಮಹತ್ವ, ಗುರುಗಳ ಪ್ರಾಮುಖ್ಯತೆಯ ಬಗ್ಗೆ ಮಕ್ಕಳಿಗೆ ತಮ್ಮ ಬಾಲ್ಯದ ಶಾಲಾ ದಿನಗಳ ಅನುಭವಗಳನ್ನು ನೆನಪಿಸಿ ಕೊಂಡು ವಿವರಿಸಿದರು.

ಶಾಲೆಯ ಉತ್ತಮ ಪರಿಸರ, ಸುಸಜ್ಜಿತವಾದ ಕಟ್ಟಡ, ವಿದ್ಯಾರ್ಥಿಗಳಿಗೆ ಸಾಕಷ್ಟು ಮಾಹಿತಿಗ ಳನ್ನು ನೀಡುವ ಗೋಡೆ ಫಲಕಗಳನ್ನು ವೀಕ್ಷಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಶಿಕ್ಷಣವೆಂದರೆ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವುದೊಂದೇ ಅಲ್ಲ. ಜೀವನದಲ್ಲಿ ಉತ್ತಮ ಸಂಸ್ಕಾರ, ದೇಶ ಪ್ರೇಮ, ಗುರುಹಿರಿಯರು ಹಾಗೂ ಶಾಲೆಯ ಬಗ್ಗೆ ಗೌರವ ಮುಂತಾದ ಮೌಲ್ಯಗಳನ್ನು ಬೆಳೆಸಿ ಕೊಳ್ಳ ಬೇಕೆಂದು ಮಕ್ಕಳಿಗೆ ಕಿವಿಮಾತನ್ನು ಹೇಳಿದರು.

ಧಾರವಾಡ ಗ್ರಾಮೀಣ ವಲಯದ ಕ್ಷೇತ್ರಶಿಕ್ಷಣಾ ಧಿಕಾರಿಗಳಾದ ರಾಮಕೃಷ್ಣ. ಸದಲಗಿಯವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿ, 2023-24 ನೆಯ ಸಾಲಿನಲ್ಲಿ ಧಾರವಾಡ ತಾಲೂಕು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಸಾಧಿಸಿದೆ. ಇದಕ್ಕೆ ಕಾರಣೀಭೂತರಾದ ತಾಲೂಕಿನ ಎಲ್ಲಾ ಮುಖ್ಯೋಪಾಧ್ಯಾಯರಿಗೆ, ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.

ಗ್ರಾಮ ಪರಿವರ್ತನಾ ಟ್ರಸ್ಟ್ ನ ಅಧ್ಯಕ್ಷರಾದ ಶಿವಪ್ಪ ಕುರಗುಂದರವರು ಮಾತನಾಡಿ ಸರಕಾರವು ಶಿಕ್ಷಣಕ್ಕಾಗಿ ಸಾಕಷ್ಟು ಯೋಜನೆ ಗಳನ್ನು ಜಾರಿಗೆ ತಂದಿದೆ. ಉತ್ತಮ ಶಿಕ್ಷಕರಿದ್ದಾರೆ. ಇದರ ಪ್ರಯೋಜನವನ್ನು ಎಲ್ಲ ವಿದ್ಯಾರ್ಥಿಗಳೂ ಪಡೆಯಬೇಕು ಎಂದು ಹೇಳಿದರು.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪಾಂಡುರಂಗ ಅಂಕಲಿ ಅವರು ಶಾಲೆಗೆ ಗ್ರಾಮ ಪರಿವರ್ತನಾ ಟ್ರಸ್ಟಿನ ಸಹಕಾರವನ್ನು ಸ್ಮರಿಸಿದರು. ವಿದ್ಯಾರ್ಥಿ ಗಳಾದ ಸುಮಾ ಮಡಿವಾಳರ, ಪ್ರೀತಿ ಸಂಗಪ್ಪ ನವರ, ಪೂಜಾರ ಶಾಲಾ ಪ್ರಾರಂಭೋತ್ಸವದ ಕುರಿತಾಗಿ ಮಾತನಾಡಿದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಪ ಪ್ರಾಂಶುಪಾಲರಾದ ಡಾ. ಪೂರ್ಣಿಮಾ ಮುಕ್ಕುಂ ದಿಯವರು ಸರ್ವರನ್ನು ಸ್ವಾಗತಿಸಿದರು. ವಿಜಯ ಲಕ್ಷ್ಮೀ ಪುರಾಣಿಕಮಠ ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಪ್ರೇಮಾ.ಎಲಿಗಾರ ವಂದಿಸಿದರು

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರಿ ಪ್ರಾಚಾ ರ್ಯರಾದ ಎನ್. ಟಿ. ಕಾಖಂಡಕಿ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ತನ್ವೀರ ಡಿ., ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಶೇಖಪ್ಪ ಮಂಗಳಗಟ್ಟಿ, ಸದಸ್ಯರಾದ ಶಂಕ್ರಣ್ಣ ಬಾಚ ಗುಂಡಿ,

ಶಿಕ್ಷಣ ಪ್ರೇಮಿಗಳಾದ ಮಲ್ಲಿಕಾರ್ಜುನ ಜಕ್ಕ ಣ್ಣವರ, ಶಿಕ್ಷಣ ಸಂಯೋಜಕರಾದ ಟಿ. ಎನ್. ಸಯ್ಯದ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಾಲೆಯ ಶಿಕ್ಷಕರು, ಗ್ರಾಮಸ್ಥರು ಹಾಗೂ ಪಾಲಕರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....