LIVE TV LocalCrimeNationalInternationalPoliticsEducationTechnologyEntertainmentSportsFeature
Entertainment News

ನಟಿ ಸಂಜಾನ ಗುಲ್ರಾನಿ ಸಿಕ್ತು ಜಾಮೀನು – ಹೈಕೊರ್ಟ್ ನಿಂದ ಷರುತ್ತು ಬದ್ದ ಮಂಜೂರು

ಬೆಂಗಳೂರು

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ಸಂಜನಾ ಗಲ್ರಾನಿ ಕೊನೆಗೂ ಹೈಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಮೂರು ಲಕ್ಷದ ವೈಯಕ್ತಿಕ ಬಾಂಡ್ ಜೊತೆಗೆ ತಿಂಗಳಲ್ಲಿ ಎರಡು ಬಾರಿ ತನಿಖಾಧಿಕಾರಿ ಎದುರು ಸಂಜನಾ ಹಾಜರಾಗಿ ತನಿಖೆಗೆ ಸಹಕರಿಸಬೇಕೆಂದು ಸೂಚಿಸಿರುವ ನ್ಯಾಯಾಲಯ ಷರತ್ತುಗಳನ್ನು ನೀಡಿ ಜಾಮೀನು ನೀಡಿದೆ.

ಕಳೆದ 84 ದಿನಗಳ ಕಾಲ ಜೈಲಿನಲ್ಲಿ ಕಳೆದ ನಂತರ ಸಂಜನಾ ಅವರಿಗೆ ಈಗ ಜಾಮೀನು ಸಿಕ್ಕಿದೆ. ಜೈಲಿನಲ್ಲಿರುವ ಸಂಜನಾ ಅವರಿಗೆ ಆರೋಗ್ಯ ಸರಿಯಲ್ಲದ ಕಾರಣದಿಂದಾಗಿ ಜಾಮೀನು ನೀಡಬೇಕೆಂದು ಕೆಲವೇ ದಿನಗಳ ಹಿಂದೆಯಷ್ಟೆ ನಟಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠ ಸಂಜನಾ ಅವರ ಆರೋಗ್ಯ ತಪಾಸಣೆಗೆ ಅನುಮತಿ ನೀಡಿ, ಅದರ ವರದಿಯನ್ನು ಡಿ.10ರ ಒಳಗೆ ಸಲ್ಲಿಸುವಂತೆ ಸೂಚನೆ ನೀಡಿತ್ತು.

ಅದರಂತೆ ಸಂಜನಾ ಅವರನ್ನು ನಗರದ ವಾನಿ ವಿಲಾಸ್ ಆಸ್ಪತ್ರೆಗೆ ಕರೆತಂದು ಆರೋಗ್ಯ ತಪಾಸಣೆ ಮಾಡಿಸಲಾಗಿತ್ತು. ಆರೋಗ್ಯ ತಪಾಸಣೆಯ ನಂತರ ವೈಧ್ಯಕೀಯ ವರದಿಯನ್ನು ನ್ಯಾಯಾಲಯಕ್ಕೇ ನೀಡಲಾಗಿತ್ತು. ವರದಿಯನ್ನು ಆಧರಿಸಿ ನ್ಯಾಯಾಧೀಶರು ನಟಿಯ ವಕೀಲರ ಮನವಿ ಪುರಸ್ಕರಿಸಿ ಕೊನೆಗೂ ನಟಿ ಸಂಜನಾಗೆ ಜಾಮೀನು ನೀಡಿದ್ದಾರೆ.ನಟಿ ಸಂಜನಾ ಇಂದು ಸಂಜೆಯೇ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಅನಾರೋಗ್ಯದಿಂದ ಬಳಲುತ್ತಿರುವ ಸಂಜನಾ ಅವರನ್ನು ತಪಾಸಣೆ ಮಾಡಿ ವೈದ್ಯರು ನೀಡಿದ್ದ ವರದಿಯ ಆಧಾರದ ಮೇಲೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಇಂದು ಸಂಜೆಯೇ ಆದೇಶ ಜೈಲಾಧಿಕಾರಿಗಳ ಕೈ ಸೇರಿದರೆ, ಸಂಜನಾ ಜೈಲಿನಿಂದ ರಿಲೀಸ್ ಆಗುವ ಸಾಧ್ಯತೆ ಇದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಣಿ ಅವರನ್ನು ಬಂಧಿಸಿದ ನಂತರ ಸಂಜನಾ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಸೆ. 9ರಂದು ಸಿಸಿಬಿ ಪೊಲೀಸರು ಸಂಜನಾ ಅವರನ್ನು ಬಂಧಿಸಿ, ಸೆ. 16ರಂದು ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು.ಒಟ್ಟಾರೆ 84 ದಿನಗಳ ನಂತರ ಕೊನೆಗೂ ನಟಿ ಸಂಜನಾಗೆ ಬಿಡುಗಡೆ ಭಾಗ್ಯ ಸಿಕ್ಕಿದ್ದು ಜೈಲಿನಿಂದ ಇಂದು ಸಂಜೆ ಬಿಡುಗಡೆಯಾಗಲಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....