LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅಡುಗೆ ಸಹಾಯಕರ ನೇಮಕಾತಿಗೆ ಅರ್ಜಿ ಆಹ್ವಾನ - ಆಸಕ್ತರು ಅರ್ಜಿ ಸಲ್ಲಿಸಬಹುದು.....

ಕೊಪ್ಪಳ -

ವಿವಿಧ ಸರ್ಕಾರಿ ಶಾಲೆಗಳಲ್ಲಿ ಅಕ್ಷರದಾಸೋಹ ಯೋಜನೆ ಅಡಿಯಲ್ಲಿ ಮಧ್ಯಾಹ್ನದ ಬಿಸಿ ಊಟದ ಅಡುಗೆ ಸಹಾ ಯಕ ಸಿಬ್ಬಂದಿಗಳ ತಾತ್ಕಾಲಿಕವಾಗಿ ನೇಮಕಾತಿ ಮಾಡಿ ಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಹೌದು ಕೊಪ್ಪಳ ದ ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ಸರ್ಕಾರಿ ಶಾಲೆಗ ಳಲ್ಲಿ ಅಕ್ಷರದಾಸೋಹ ಯೋಜನೆಅಡಿಯಲ್ಲಿ ಮಧ್ಯಾಹ್ನದ ಬಿಸಿ ಊಟದ ಅಡುಗೆ ಸಹಾಯಕ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು ಅದರಲ್ಲಿ ವಯೋನಿವೃತ್ತಿ ಹೊಂದಿದ ಸಿಬ್ಬಂದಿಗಳನ್ನು ಸರ್ಕಾರದ ಆದೇಶದಂತೆ ಆಯಾ ಶಾಲೆ ಗಳ ಮುಖ್ಯೋಪಾದ್ಯಯರು ವಯೋನಿವೃತ್ತಿ ಹೊಂದಿದ ಅಡುಗೆ ಸಹಾಯಕ ಸಿಬ್ಬಂದಿಗಳನ್ನು ಸೇವೆಯಿಂದ ಬಿಡು ಗಡೆಗೊಳಿಸಿರುತ್ತಾರೆ.ಶಾಲೆಯ ಮುಖ್ಯೋಪಾದ್ಯಯರು ನಗರಸಭೆ ಕಾರ್ಯಾಲಯಕ್ಕೆ ಪತ್ರ ಬರೆದು ಖಾಲಿಯಾದ ಹುದ್ದೆಗಳ ಭರ್ತಿ ಮಾಡಿಕೊಳ್ಳುವಂತೆ ಕೋರಿರುತ್ತಾರೆ. ಅದರಂತೆ ಕೊಪ್ಪಳ ನಗರದ ಸರಕಾರಿ ಕೇಂದ್ರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ (ಸಿ.ಪಿ.ಎಸ್)ವಿಜಯನಗರ ಆಶ್ರಯ ಕಾಲೋನಿಯ ಸರಕಾರಿ ಕಿರಿಯ ಪ್ರಾಧಮಿಕ ಶಾಲೆ ಕೊಟಗಾರಗೇರಾ ಸರಕಾರಿ ಉರ್ದು ಹಿರಿಯ ಪ್ರಾಧಮಿಕ ಶಾಲೆ ಗಾಂಧಿಸ್ಮಾರಕ ಸರಕಾರಿ ಹಿರಿಯ ಪ್ರಾಧಮಿಕ ಶಾಲೆ ಹಾಗೂ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಮುಖ್ಯ ಅಡುಗೆಯವರು ಹಾಗೂ ಅಡುಗೆ ಸಹಾ ಯಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾ ಗುತ್ತಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ನಗರದ ಖಾಯಂ ನಿವಾಸಿಯಾಗಿರಬೇಕು.ವಾರ್ಡ್‌ ನ ಮತದಾರರ ಯಾದಿ ಯಲ್ಲಿ ಅರ್ಜಿದಾರರ ಹೆಸರು ಸೇರ್ಪಡೆಯಾಗಿರಬೇಕು. ಚಾಲ್ತಿ ಸಾಲಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗ ಳನ್ನು ಲಗತ್ತಿಸಬೇಕು.ಇತ್ತೀಚಿನ ಭಾವಚಿತ್ರ ಹೊಂದಿರ ಬೇಕು.ಕುಟುಂಬದ ಪಡಿತರ ಚೀಟಿ, ಆಧಾರ್ ಕಾರ್ಡ ಹಾಗೂ ಚುನಾವಣಾ ಆಯೋಗದ ಗುರುತಿನ ಚೀಟಿಗ ಳೊಂದಿಗೆ ನಿಗದಿತ ನಮೂನೆಯಲ್ಲಿ ಜೂನ್ 24ರ ಒಳ ಗಾಗಿ ನಗರಸಭೆ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬ ಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....