LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿಯಲ್ಲಿ ಪೊಲೀಸ್ ವಾಹನ ಹಸ್ತಾಂತರ - ಬಸವರಾಜ ಹೊರಟ್ಟಿ ಚಾಲನೆ.....

ಹುಬ್ಬಳ್ಳಿ -

ವಿವಿಧ ಇಲಾಖೆಗಳ ಬೇಡಿಕೆಗೆ ಅನುಗುಣವಾಗಿ ವಾಹನ ಗಳನ್ನು ನೀಡಲಾಗುವುದು ಇಲಾಖೆಗಳು ತಮಗೆ ಬೇಡಿಕೆ ಯಿದ್ದರೆ ಪ್ರಸ್ತಾವನೆಯನ್ನು ಸಲ್ಲಿಸಿದ ತರುವಾಯ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳ ಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.

ಹುಬ್ಬಳ್ಳಿಯ ಮಿನಿವಿಧಾನಸೌಧ ಆವರಣದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ನೀಡಿರುವ ಬೊಲೆರೋ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿ ವರ್ಷ ಶಾಸಕರಿಗೆ ನೀಡಲಾಗುವ 2 ಕೋಟಿ ಅನುದಾನದಲ್ಲಿ ರಸ್ತೆ,ಕಟ್ಟಡ,ವಾಹನಗಳು,ಅಂಬ್ಯುಲೆನ್ಸ್ ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ಕಾರ್ಯಗಳಿಗೆ ಉಪಯುಕ್ತ ರೀತಿಯಲ್ಲಿ ಬಳಕೆಯಾಗ ಬೇಕು.ಪೊಲೀಸ್ ಇಲಾಖೆಗೆ ಹಳೆಯ ವಾಹನಗಳಿಗೆ ಬದಲಾಗಿ ಹೊಸ ವಾಹನಗಳನ್ನು ನೀಡಲಾಗಿದೆ. ಅವುಗಳ ನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು.ಗ್ರಾಮೀಣ ಪೊಲೀಸ್ ಠಾಣೆಗೆ ವಾಹನಗಳು ಅವಶ್ಯವಾಗಿದ್ದವು. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾ ಗಿದೆ. ಪಿಯುಸಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ಆಯಾ ಕಾಲೇಜುಗಳಿಗೆ ಸಂಬಂಧಿಸಿದೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಮಾಜಕ್ಕೆ ಧಕ್ಕೆ ತರುವ ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಬಾರದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ್, ಡಿವೈಎಸ್ಪಿ ಎಂ‌.ಬಿ. ಸಂಕದ, ಪೊಲೀಸ್ ಇನ್ಸ್ಪೆಕ್ಟರ್ ರಮೇಶ ಗೋಕಾಕ,ಜಿ.ಸಿ.ಡೂಗನವರ, ರವಿಚಂದ್ರ ಡಿ.ಬಿ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಡೇವಿಡ್ ಸೇರಿದಂತೆ ಹಲವರು ಇದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....