LIVE TV LocalCrimeNationalInternationalPoliticsEducationTechnologyEntertainmentSportsFeature
Education News

ಮತ್ತೊಂದು ಉಪವಾಸ ಸತ್ಯಾಗ್ರಹಕ್ಕೇ ಬಸವರಾಜ ಹೊರಟ್ಟಿ – 5 ರಿಂದ ಧಾರವಾಡದಲ್ಲಿ ಸತ್ಯಾಗ್ರಹ ಆರಂಭ

ಧಾರವಾಡ -

ರಾಜ್ಯ ಸರ್ಕಾರದ ವಿರುದ್ದ ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಮತ್ತೊಂದು ಹೋರಾಟಕ್ಕೇ ಮುಂದಾಗಿದ್ದಾರೆ. ಈ ಹಿಂದೆ ದೊಡ್ಡ ಪ್ರಮಾಣದಲ್ಲಿ ಹೋರಾಟ ಮಾಡಿದ್ದ ಹೊರಟ್ಟಿಯವರು ಈಗ ಮತ್ತೊಂದು ಹೋರಾಟಕ್ಕೇ ಸಿದ್ದರಾಗಿದ್ದಾರೆ. ಡಿಸೆಂಬರ್ 5 ರಿಂದ ಧಾರವಾಡದಲ್ಲಿ ಉಪವಾಸ ಸತ್ಯಾಗ್ರಹದೊಂದಿಗೆ ಹೋರಾಟವನ್ನು ಆರಂಭ ಮಾಡಲಿದ್ದಾರೆ.

ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ,ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ನೌಕರರ ಮತ್ತು ಆಡಳಿತ ಮಂಡಳಿಗಳ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ನೇತ್ರತ್ವದಲ್ಲಿ ಬಸವರಾಜ ಹೊರಟ್ಟಿಯವರು ಮತ್ತೊಂದು ಹೋರಾಟವನ್ನು ಮಾಡುತ್ತಿದ್ದಾರೆ.

ಪ್ರಮುಖವಾಗಿ 1995 ರ ನಂತರ ಆರಂಭಗೊಂಡ ಶಾಶ್ವತ ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಅನುದಾನ ನೀಡುಬೇಕು,ನೂತನ ಪಿಂಚಣಿ ಯೋಜನೆ ಜಾರಿಗೆ ತರಬೇಕು, ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಧಾರವಾಡದ ಮುತ್ತಣ್ಣ ಸ್ಮಾರಕ ಪೊಲೀಸ್ ವಸತಿ ಶಾಲೆಯ ಶಿಕ್ಷಕರ ವೇತನ ಬಿಡುಗಡೆ ಹಾಗೇ ಶಾಲಾ ಆರಂಭಕ್ಕೇ ಅವಕಾಶ ನೀಡಬೇಕು ಹೀಗೆ ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಈ ಒಂದು ಸತ್ಯಾಗ್ರಹ ಆರಂಭವಾಗಲಿದ್ದು ಹೋರಾಟದಲ್ಲಿ ರಾಜ್ಯದ ರಾಜ್ಯದ ಕೇಂದ್ರ ಸಮಿತಿಯ ಸದಸ್ಯರು ಎಲ್ಲಾ ಜಿಲ್ಲಾ ಕೇಂದ್ರದಿಂದ ಶಿಕ್ಷಕರು ಶಿಕ್ಷಣ ಸಂಸ್ಥೆಗಳ ಮಾಲೀಕರು ಸೇರಿದಂತೆ ಹಲವರು ಹೊರಟ್ಟಿಯವರೊಂದಿಗೆ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....