LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಐಪಿಎಲ್ ಮುನ್ನ ದೇಶೀಯ ಟೂರ್ನಿ ಆಯೋಜನೆಗೆ ಬಿಸಿಸಿಐ ಪ್ಲಾನ್

ನವದೆಹಲಿ -

ಈಗಷ್ಟೇ ದೂರದ ದುಬೈ ನಲ್ಲಿ 13ನೇ ಐಪಿಎಲ್ ಆವೃತ್ತಿಯನ್ನು ಮುಗಿಸಿಕೊಂಡು ಬಂದಿರುವ ಬಿಸಿಸಿಐ ಈದ ಮತ್ತೊಂದು ಹೊಸ ಪ್ಲಾನ್ ನಲ್ಲಿ ಇದೆ. ಹೌದು ಒಂದು ಕಡೆ 13ನೇ ಐಪಿಎಲ್ ಆವೃತ್ತಿಯನ್ನು ಮುಗಿಸಿಕೊಂಡು 14ನೇ ಆವೃತ್ತಿಗೆ ಸಿದ್ದತೆ ಒಂದು ಕಡೆ ನಡೀತಾ ಇದ್ದರೇ ಮತ್ತೊಂದು ಕಡೆ ಇದೀಗ.ಮುಂದಿನ ಆವೃತ್ತಿಗೆ ಮತ್ತೊಂದು ತಂಡವನ್ನು ಸೇರ್ಪಡೆಗೊಳಿಸಲು ಬಿಸಿಸಿಐ ಎಲ್ಲ ರೀತಿಯ ಸಿದ್ಧತೆ ನಡೆಸುತ್ತಿದೆ.ಇದರೊಂದಿಗೆ ಈಗ ಬಿಸಿಸಿಐ ಮತ್ತೊಂದು ಹೊಸ ಪ್ಲಾನ್ ಮಾಡಿದ್ದು ದೇಶೀಯ ಕ್ರಿಕೆಟ್‌ನತ್ತ ಒಲವು ವ್ಯಕ್ತಪಡಿಸಿದೆ.

ಹೌದು ಐಪಿಎಲ್-14 ಗೆ ಆಟಗಾರರನ್ನು ಹರಾಜಿನಲ್ಲಿ ಕೊಂಡುಕೊಳ್ಳಲು ಅನುಕೂಲವಾಗುವಂತೆ ದೇಶಿಯ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟಿ 20 ಟ್ರೋಫಿ ಆಯೋಜಿಸಲು ಬಿಸಿಸಿಐ ಯೋಚಿಸಿದ್ದು ಮಾಡಲು ಪ್ಲಾನ್ ಮಾಡಿಕೊಳ್ಳುತ್ತಿದೆ.
ಕರೋನಾ ಮಹಾಮಾರಿಯ ನಡುವೆಯೂ ಐಪಿಎಲ್ ನ್ನು ದೊಡ್ಡ ಸವಾಲಾಗಿ ಸ್ವೀಕರಿಸಿಕೊಂಡು 13ನೇ ಐಪಿಎಲ್ ನ್ನು ದೂರದ ದುಬೈ ನಲ್ಲಿ ಆಯೋಜಿಸಿ ಯಶಶ್ವಿಯಾಗಿ ಮುಗಿಸಿಕೊಂಡು ಬಂದಿದೆ ಬಿಸಿಸಿಐ. ಈಗ ರಣಜಿ ಟ್ರೋಫಿಗೂ ಮುನ್ನ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಸಂಘಟಿಸಲು ತೀರ್ಮಾನಿಸಿದೆ.

ಪಂಚತಾರಾ ಹೋಟೆಲ್‌ಗೆ ಹತ್ತಿರವಾಗಿರುವ ಮೈದಾನಗಳಿಗೆ ಆದ್ಯತೆ ನೀಡಲಾಗುತ್ತಿದೆ. ಈ ಕುರಿತು 10 ರಾಜ್ಯ ಘಟಕಗಳನ್ನು ಸಂಪರ್ಕ ಮಾಡಲಾಗಿದ್ದು ದೇಶಿಯ ಪಂದ್ಯಾವಳಿ ಆಯೋಜನೆ ಕುರಿತಂತೆ ಪ್ಲಾನ್ ಮಾಡಿಕೊಳ್ಳುತ್ತಿದೆ ಬಿಸಿಸಿಐ.ಎರಡು ವಾರಗಳ ಅಂತರದಲ್ಲಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಆಯೋಜಿಸಿ, ಬಳಿಕ ರಣಜಿ ಟ್ರೋಫಿಗೆ ಚಾಲನೆ ನೀಡಲು ಬಿಸಿಸಿಐ ತೀರ್ಮಾನಿಸಿದೆ.

ಬಂಗಾಳ ಕ್ರಿಕೆಟ್ ಸಂಸ್ಥೆ ಟಿ20 ಟೂರ್ನಿ ಆಯೋಜಿಸಲು ಹೆಚ್ಚಿನ ಆಸಕ್ತಿ ತೋರಿದೆ ಎನ್ನಲಾಗಿದ್ದು ದೇಶಿಯ ಕ್ರೀಕೇಟ್ ಪಂದ್ಯಾವಳಿ ಆರಂಭವಾದ್ರೆ ಕ್ರೀಕೇಟ್ ನಲ್ಲಿ ಮತ್ತಷ್ಟು ಪ್ರತಿಭಾವಂತ ಆಟಗಾರರು ಹೊರಹೊಮ್ಮಲಿದ್ದು ಇತ್ತ ಕ್ರಿಕೇಟ್ ಪ್ರೇಮಿಗಳು ಸಖತ್ ಮನರಂಜನೆ ಸಿಗಲಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....