LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಖತರ್ನಾಕ ಬೈಕ್ ಕಳ್ಳರ ಬಂಧನ – 28 ಬೈಕ್ ಗಳು ವಶ – ವಿದ್ಯಾನಗರ ಪೊಲೀಸರ ಕಾರ್ಯಾಚರಣೆ

ಹುಬ್ಬಳ್ಳಿ -

ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಮತ್ತು ತಗೆದುಕೊಳ್ಳುತ್ತಿದ್ದ ಖತರ್ನಾಕ್ ಕಳ್ಳರನ್ನು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ. ನಗರದ ಹಲವೆಡೆ ರಸ್ತೆ ಅಕ್ಕಪಕ್ಕದಲ್ಲಿ ಬೇರೆ ಬೇರೆ ಸ್ಥಳಗಳಲ್ಲಿ ನಿಲ್ಲಿಸಲಾಗಿದ್ದ ಬೈಕ್ ಗಳನ್ನು ಕಳ್ಳತನ ಮಾಡಿ ಅವುಗಳನ್ನು ಮಾರಾಟ ಮಾಡುತ್ತಿದ್ದನು. ಹೀಗೆ ಕಳ್ಳತನ ಮಾಡಿ ಮಾರಾಟ ಮಾಡುವ ಸಮಯದಲ್ಲಿ ಕಳ್ಳನನ್ನು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

ಹಳೇ ಹುಬ್ಬಳ್ಳಿಯ ಪಡದಯ್ಯನ ಹಕ್ಕಲ ಬಡಾವಣೆಯ ನಿವಾಸಿ ನಾಗರಾಜ ಅಂಬಿಗೇರ ಬಂಧಿತ ಆರೋಪಿಯಾಗಿದ್ದಾನೆ.ಇನ್ನೂ ಇವನ ಹೇಳಿಕೆ ಆಧಾರದ ಮೇಲೆ ಬೈಕ್ ಗಳನ್ನು ಇವನು ತೆಗೆದುಕೊಂಡು ಬಂದ ಬೈಕ್ ಗಳನ್ನು ತಗೆದುಕೊಳ್ಳುತ್ತಿದ್ದ ಇನ್ನಿಬ್ಬರನ್ನು ಬಂಧಿಸಿದ್ದಾರೆ. ಮೆಹಬೂಬ ಅತ್ತಾರ, ಮತ್ತು ರಸೂಲ ಕಿತ್ತೂರ ಇವರನ್ನು ಬಂಧಿಸಿದ್ದಾರೆ. ಇವರಿಬ್ಬರೂ ಹಳೇ ಹುಬ್ಬಳ್ಳಿಯ ನಿವಾಸಿಗಳಾಗಿದ್ದಾರೆ. ಬಂಧಿತರಿಂದ TVs ಏಕ್ಸ್ ಎಲ್ ,3 ಸ್ಪೆಂಡರ್ ಪ್ಲಸ್ ಸೇರಿದಂತೆ 28 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಾಗರಾಜ ಗ್ಯಾರೇಜ್ ವೊಂದನ್ನು ಇಟ್ಟುಕೊಂಡಿದ್ದು ಅಲ್ಲಿಗೆ ಬರುವ ಸಾರ್ವಜನಿಕರನ್ನು ನಂಬಿಸಿ ಅವರಿಗೆ ಬೈಕ್ ಗಳನ್ನು ಮಾರಾಟ ಮಾಡುತ್ತಿದ್ದನು. ಹೀಗೆ ಮಾಡುತ್ತಿದ್ದ ಖತರ್ನಾಕ್ ಕಳ್ಳನ ಮಾಹಿತಿ ಪಡೆದ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಕೊನೆಗೂ ಎಡೆ ಮೂರಿ ಕಟ್ಟಿದ್ದಾರೆ.

ನಾಗರಾಜನನ್ನು ಬಂಧಿಸಿರುವ ವಿದ್ಯಾನಗರ ಪೊಲೀಸರು ವಿಚಾರಣೆ ಮಾಡಿ ಕಳ್ಳತನ ಮಾಡಿ ಮಾರಾಟ ಮಾಡಿದ್ದ 25 ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಸಧ್ಯ ಬೇರೆ ಬೇರೆ ಕಂಪನಿಗಳ ಬೈಕ್ ಗಳನ್ನು ವಿದ್ಯಾನಗರ ಪೊಲೀಸರು ವಶಪಡಿಸಿಕೊಂಡು ಯಶಶ್ವಿ ಕಾರ್ಯಾಚರಣೆ ಮಾಡಿದ್ದಾರೆ.

ವಿದ್ಯಾನಗರ ಇನಸ್ಪೇಕ್ಟರ್ ಆನಂದ ವನಕುದರಿ ನೇತ್ರತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ. ಇನಸ್ಪೇಕ್ಟರ್ ರೊಂದಿಗೆ ಪಿಎಸೈ ಶಿವಾನಂದ ಬನ್ನಿಕೊಪ್ಪ ಠಾಣೆಯ ಸಿಬ್ಬಂದಿಗಳಾದ ಸುನೀಲ ಲವಾಣಿ,ರಮೇಶ ಹಲ್ಲೆ,ಶಂಕರ ಹೊಸಮನಿ, ಎಸ್ ಎಚ್ ತಹಶೀಲ್ದಾರ, ಬಿ ಎಚ್ ಹಡಪದ,ಮಂಜು ಏಣಗಿ, ಯಳವತ್ತಿ, ವಾಯ್ ಎಮ್ ಶಂಡ್ಗೆ ಸೇರಿದಂತೆ ಹಲವು ಸಿಬ್ಬಂದಿಗಳು ಈ ಒಂದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಇನ್ನೂ ದೊಡ್ಡ ಪ್ರಮಾಣದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿದ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರಿಗೆ ಪೊಲೀಸ್ ಆಯುಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....