LIVE TV LocalCrimeNationalInternationalPoliticsEducationTechnologyEntertainmentSportsFeature
State News

ಈದ್ ಮಿಲಾದ್ ಆಗಸ್ಟ್.26ರಂದು ರಾಜ್ಯಾಧ್ಯಂತ 'ಸಾರ್ವತ್ರಿಕ ರಜೆ' ಘೋಷಣೆ.....

ಬೆಂಗಳೂರು -

ಈದ್ ಮಿಲಾದ್ ಹಿನ್ನಲೆಯಲ್ಲಿ ಆಗಸ್ಟ್.26 ರಂದು ರಾಜ್ಯಾಧ್ಯಂತ 'ಸಾರ್ವತ್ರಿಕ ರಜೆ' ಘೋಷಣೆ ಮಾಡ ಲಾಗಿದೆ ಹೌದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಈದ್ ಮಿಲಾದ್ ಹಬ್ಬದ ಸಾರ್ವತ್ರಿಕ ರಜೆಯನ್ನು ದಿನಾಂಕ: 26.08.2026ರ ಬದಲಾಗಿ ದಿನಾಂಕ: 25.08.2026ರಂದೇ ಘೋಷಿಸಲು ಆಯಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಅಧಿಕೃತ ನಿರ್ದೇಶನ ನೀಡಿದೆ.

ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯಲ್ಲಿ ಆಗಸ್ಟ್ 26ರಂದು ರಾಜ್ಯಾದ್ಯಂತ ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಿಸಲಾಗಿತ್ತು. ಆದರೆ ಸ್ಥಳೀಯವಾಗಿ ಚಂದ್ರದರ್ಶನದ ಆಧಾರದ ಮೇಲೆ ಹಬ್ಬ ಆಚರಿಸುವ ಹಿನ್ನೆಲೆಯಲ್ಲಿ, ರಜಾ ದಿನ ವನ್ನು ಆಗಸ್ಟ್ 25ಕ್ಕೆ ಬದಲಾಯಿಸುವಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದರು.

news_1787587270_0_334.webp

 

ಜಿಲ್ಲಾಧಿಕಾರಿಗಳ ಕೋರಿಕೆಯನ್ನು ಪರಿಗಣಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು, "ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಜಿಲ್ಲಾಧಿಕಾರಿಗಳ ಹಂತದಲ್ಲೇ ನಿಯಮಾ ನುಸಾರ ಸೂಕ್ತ ತೀರ್ಮಾನ ಕೈಗೊಳ್ಳಬೇಕು," ಎಂದು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ರವಾನಿಸಿದ್ದಾರೆ.

ಇದರೊಂದಿಗೆ ಕರಾವಳಿ ಭಾಗದಲ್ಲಿ ಆಗಸ್ಟ್ 25 ರಂದೇ ಸರ್ಕಾರಿ ಕಚೇರಿಗಳು, ಶಾಲೆ-ಕಾಲೇಜುಗಳಿಗೆ ಈದ್ ಮಿಲಾದ್ ರಜೆ ದೊರೆಯುವುದು ಖಚಿತವಾಗಿದೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....