LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಬೀದಿ ಬದಿ ವ್ಯಾಪಾರಸ್ಥರಿಗೆ ಬಲ ತುಂಬಿದ ಸಾಲ ಮೇಳ

ಧಾರವಾಡ -

ಕೋವಿಡ್ ಸಂಕಷ್ಟದ ಅವಧಿಯಲ್ಲಿ ವ್ಯಾಪಾರ ವಹಿವಾಟಿಗೆ ಧಕ್ಕೆ ತಂದುಕೊಂಡು ಅಕ್ಷರಶಃ ಬೀದಿಗೆ ಬಂದಿದ್ದ ಬೀದಿ ವ್ಯಾಪಾರಸ್ಥರ ಬದುಕಿಗೆ ಹೊಸ ತಿರುವು ದೊರೆತಿದೆ. ಮತ್ತೆ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ ಮಂತ್ರಿ ಸ್ವನಿಧಿ ಸಾಲಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಬ್ಯಾಂಕುಗಳು ಮುಂದಾಗಿದ್ದೇ ಇದಕ್ಕೆ ಕಾರಣವಾಗಿದೆ. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಮಹಾನಗರ ಪಾಲಿಕೆ ಸಹಯೋಗದಲ್ಲಿ ಈ ಕುರಿತು ಬ್ರಹತ್ ಸಾಲ ಮೇಳವನ್ನು ಧಾರವಾಡದ ತನ್ನ ಪ್ರಧಾನ ಕಛೇರಿಯಲ್ಲಿ ಆಯೋಜಿಸಿತ್ತು. ಸಾಲ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಪಿ ಗೋಪಿ ಕೃಷ್ಣ ಬೀದಿ ವ್ಯಾಪಾರಿಗಳು ಪ್ರಾದೇಶಿಕ ಮತ್ತು ರಾಷ್ಟ್ರದ ಆರ್ಥಿಕತೆಯಲ್ಲಿ ಬಹುಮುಖ್ಯ ಪಾತ್ರವಹಿಸುತ್ತಿದ್ದು ಸ್ವ ಉದ್ಯೋಗದ ಮೂಲಕ ನಿರುದ್ಯೋಗ ನಿವಾರಣೆಯಲ್ಲೂ ಗಣನೀಯ ಕೊಡುಗೆ ನೀಡಿದ್ದಾರೆ ಎಂದರು.

ಸಣ್ಣ ಪುಟ್ಟ ವ್ಯಾಪಾರಸ್ಥರು ಮತ್ತೆ ವ್ಯವಹಾರ ಪ್ರಾರಂಭಿಸದಿದ್ದರೆ ಆರ್ಥಿಕ ಚಕ್ರ ತಿರುಗಲಾರದು ಎಂದರು. ರೂ.10,000 /- ಬಂಡವಾಳ ಮತ್ತೆ ಉದ್ಯೋಗ ಕಟ್ಟಿಕೊಳ್ಳಲು ಕಾಯಕಲ್ಪ ನೀಡಬಲ್ಲದು ಎಂದರು. ಪ್ರಧಾನ ಮಂತ್ರಿ ಸ್ವ ನಿಧಿ ಸಾಲ ಯೋಜನೆಯನ್ವಯ ಅರ್ಹ ಬೀದಿ ಬದಿ ವ್ಯಾಪಾರಿಗಳಿಗೆ ಒಂದು ವರ್ಷದ ಅವಧಿಗೆ ಆಧಾರ ರಹಿತ ಸಾಲವಾಗಿ ರೂ. 10,000/- ನೀಡಲಾಗುತ್ತದೆ. ಸರಿಯಾಗಿ ಸಾಲ ಮರುಪಾವತಿಸುವವರಿಗೆ ಕೇಂದ್ರ ಸರ್ಕಾರ 7 % ಬಡ್ಡಿ ಸಹಾಯಧನವನ್ನೂ ನೀಡುತ್ತದೆ. ಡಿಜಿಟಲ್ ವಹಿವಾಟನ್ನು ಪ್ರೋತ್ಸಾಹಿಸಲು ವಹಿವಾಟಿಗನುಗುಣವಾಗಿ ಅದಕ್ಕೂ ಪ್ರೂತ್ಸಾಹಧನ ಕೂಡ ನೀಡಲಾಗುವುದು ಎಂದರು.

ಇನ್ನೂ ಬ್ಯಾಂಕು ಇಲ್ಲಿಯವರೆಗೆ 9000 ಅರ್ಜಿ ಸ್ವೀಕರಿಸಿದ್ದು ಅದರಲ್ಲಿ 2000 ಜನರಿಗೆ 2 ಕೋಟಿ ರೂ ಸಾಲ ವಿತರಿಸಿದೆ. ಉಳಿದವುಗಳು ಪರಿಶೀಲನೆಯಲ್ಲಿವೆ. ಈ ಸಾಲ ಯೋಜನೆಯಲ್ಲಿ ಸರಿಯಾಗಿ ಸಾಲ ಮರುಪಾವತಿಸುವವರಿಗೆ ಮತ್ತೆ ಹೆಚ್ಚಿನ ಸಾಲ ನೀಡಿ ವ್ಯವಹಾರ ವಿಸ್ತರಿಸಿಕೊಳ್ಳಲು ಅನುವು ಮಾಡಿಕೊಡಲಾಗುವುದು ಎಂದು ಗೋಪಿಕೃಷ್ಣ ಹೇಳಿದರು. ಇನ್ನೂ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಹು- ಧಾ ಮಹಾನಗರ ಪಾಲಿಕೆಯ ವಿಭಾಗೀಯ ಸಹಾಯಕ ಆಯುಕ್ತ ರಮೇಶ ನೂಲ್ವಿ ಮಾತನಾಡಿ ಕೇಂದ್ರ ಸರ್ಕಾರದ ಈ ಯೋಜನೆಗೆ ಮಹಾನಗರ ಪಾಲಿಕೆ ಹೆಚ್ಚಿನ ಆದ್ಯತೆ ನೀಡಿದ್ದು ಈಗಾಗಲೆ 10000 ಕ್ಕೂ ಮಿಕ್ಕಿದ ಅರ್ಹ ಬೀದಿ ವ್ಯಾಪಾರಿಗಳಿಗೆ ವಿವಿಧ ಬ್ಯಾಂಕುಗಳಿಂದ ಸಾಲ ದೊರೆಯುವಂತೆ ನೋಡಿಕೊಳ್ಳಲಾಗಿದೆ.

ಈ ಯೋಜನೆಯ ವ್ಯವಸ್ಥಿತ ನಿರ್ವಹಣೆಯಲ್ಲಿ ಪಾಲಿಕೆ ರಾಜ್ಯದಲ್ಲೇ ಮಂಚೂಣಿಯಲ್ಲಿದೆ ಎಂದರು. ಯೋಜನೆಯ ವಿವರ ನೀಡಿ ಮಾತನಾಡಿದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಚಂದ್ರಪ್ಪ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕು ಈ ಸಾಲ ಮೇಳದ ಮೂಲಕ ಜನಸಾಮಾನ್ಯರೊಂದಿಗಿದೆ ಎಂಬುದನ್ನು ಸಾಬೀತು ಪಡಿಸಿದೆ ಎಂದರು.ಇನ್ನೂ ಈ ಒಂದು ಮೇಳದಲ್ಲಿ ಸ್ಥಳದಲ್ಲೇ 100 ಬೀದಿ ವ್ಯಾಪಾರಿಗಳಿಗೆ ಸಾಲ ವಿತರಿಸಲಾಯಿತು.

ಈ ಒಂದು ಕಾರ್ಯಕ್ರಮದಲ್ಲಿ ಬ್ಯಾಂಕಿನ ಮಹಾಪ್ರಬಂಧಕ ಚಂದ್ರಶೇಖರ ಡಿ ಮೋರೊ, ಧಾರವಾಡ ಪ್ರಾದೇಶಿಕ ವ್ಯವಸ್ಥಾಪಕ ಕೃಷ್ಣರಾಜ ಅಡಿಗ ಮತ್ತು ಹು- ಧಾ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳು ಕೆವಿಜಿ ಬ್ಯಾಂಕ್ ನ ಸಾರ್ವಜನಿಕರ ಅಧಿಕಾರಿ ಉಲ್ಲಾಸ ಗುಣಗಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....