LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಚಾಲನೆ.....

ಧಾರವಾಡ -

ಕಠಿಣ ಪರಿಶ್ರಮದ ಸಿಹಿ ಫಲವೇ ಯಶಸ್ಸು ಸತತ ಪ್ರಯತ್ನದ ಪರಿಣಾಮವೇ ಸಾಧನೆ.ನಮ್ಮ ಮಾತಿಗಿಂತ ಕಲಾಕೃತಿಗಳು ಮಾತನಾಡುವಂತಿರಬೇಕು ಕಲೆಯು ಕಲೆಗಾರನ ಸ್ವತ್ತು ಎಂದು ಹಿರಿಯ ಕಲಾವಿದ ಎಂ .ಆರ್. ಬಾಳಿಕಾಯಿ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದಡಿ ಇಲ್ಲಿನ ಸರ್ಕಾರಿ ಕಲಾ ಗ್ಯಾಲರಿಯಲ್ಲಿ ಏರ್ಪಡಿಸಿರುವ ಸೌಜನ್ಯ ಕರಡೋಣಿ ಅವರ ಮೂರು ದಿನಗಳ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.ಜಗತ್ತಿನ ಉತ್ತುಂಗ ಶಿಖರದಲ್ಲಿ ಚಿತ್ರಕಲೆ ಇದೆ.ಚಿತ್ರಕಲೆ ಭಾರತೀಯ ಮೂಲದ್ದಾ ಗಿದೆ.ಚಿತ್ರಕಲೆಯು ಮನುಷ್ಯನ ಆಚಾರ-ವಿಚಾರ ಬೆಳೆಸಿ ಕಲ್ಪನಾಶಕ್ತಿಯನ್ನು ಹೆಚ್ಚಿಸುತ್ತದೆ ಎಂದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ ಮಾತನಾಡಿ,ಕಲೆ,ಕಲಾವಿದರ ಪ್ರೋತ್ಸಾಹಕ್ಕೆ ಸರ್ಕಾರ ರೂಪಿಸಿರುವ ಯೋಜನೆಗಳನ್ನು ವಿವರಿಸಿದರು. ಹಿರಿಯ ಕಲಾವಿದ ಬಿ.ಮಾರುತಿ ಮಾತನಾಡಿ,ನಮ್ಮ ನೆಲ-ಜಲದಲ್ಲಿ ಉತ್ತಮವಾದ ಕಲೆ ನೆಲೆಯೂರಿದೆ.ಉತ್ತಮ ಕಲೆಯನ್ನು ಕಲಾಕೃತಿಗಳನ್ನು ಹೆಮ್ಮೆಯಿಂದ ಹೊರಹಾಕ ಬೇಕು.ಕಲಾವಿದರು ಸತತ ಪ್ರಯತ್ನ ಮಾಡಬೇಕು. ಚಿತ್ರಕಲಾ ವಿಶ್ವವಿದ್ಯಾಲಯದ ಸ್ಥಾಪಿಸಲು ಸರಕಾರಕ್ಕೆ ಮನವಿ ಮಾಡುತ್ತೇವೆ. ವ ಧಾರವಾಡದಲ್ಲಿ ಚಿತ್ರಕಲಾ ಪ್ರದರ್ಶನಕ್ಕೆ ಉತ್ತಮ ಗ್ಯಾಲರಿಯ ಅವಶ್ಯಕತೆ ಇದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಚಂದ್ರಕಾಂತ ಬೆಲ್ಲದ ಮಾತನಾಡಿ, ಚಿತ್ರಕಲೆ ಪ್ರಾಚೀನ ಕಾಲದಿಂದಲೂ ಬಂದ ಒಂದು ಅದ್ಭುತ ಮಾಧ್ಯಮವಾಗಿದೆ.ಚಿತ್ರಕಲೆಯಿಂದ ಮನುಷ್ಯನ ಆಚಾರ-ವಿಚಾರ ಬುದ್ಧಿ ಕ್ಷಮತೆ ಹೆಚ್ಚಿಸಿ ಕಲ್ಪನಾಶಕ್ತಿಯನ್ನೂ ಕೂಡ ಬೆಳೆಸುತ್ತದೆ ವಿಜ್ಞಾನ ಹೇಳುತ್ತದೆ ಎಂದರು.

ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಗುಡಸಿ, ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಎನ್. ಹಂಸವೇಣಿ, ಡಾ.ಡಿ.ಬಿ.ಕರಡೋಣಿ, ಡಾ.ಬಿ.ಎಸ್. ಕುರಿಯವರ,ಡಾ.ಬೈರಣ್ಣವರ ಯಶವಂತಡಾ.ಬಸವರಾಜ್ ನಾಗವ್ವವನವರ, ಅನಿಲ್ ಖಾತೆದಾರ ಉಪಸ್ಥಿತರಿದ್ದರು ಜ್ಯೋತಿ ಕಾಶಿನಾಥ್ ಮಲ್ಲಪ್ಪ ಕಾರ್ಯಕ್ರಮ ನಿರೂಪಿಸಿ ದರು.

ವರದಿ - ವಾರ್ತಾ ಇಲಾಖೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....