LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿಯ ಈದ್ಗಾ ಮೈದಾನ ದಲ್ಲಿ ಗಣೇಶೋತ್ಸವ ಸುಪ್ರೀಂ ಕೋರ್ಟ್ ಗೆ ಅರ್ಜಿ - ಮತ್ತೆ ಅರ್ಜಿ ಸಲ್ಲಿಸಿದ ಅಂಜುಮನ್ ಇಸ್ಲಾಂ‌..... ಪ್ರತಿಷ್ಠಾಪನೆ ಯಾಯಿತು ಗಣೇಶ

ಹುಬ್ಬಳ್ಳಿ -

ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶೋತ್ಸವ ಆಚರಣೆ ವಿಚಾರ ಕುರಿತು ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಈಗ ಇತ್ತ ಗಣೇಶ ನನ್ನು ಅದ್ದೂರಿಯಾದ ಮೆರವಣಿಗೆ ಮೂಲಕ ಪ್ರತಿಷ್ಠಾಪನೆ ಮಾಡಲು ಪ್ಲಾನ್ ಮಾಡಲಾಗಿತ್ತು ಆದರೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಮುಂದಾದ ಹಿನ್ನೆಲೆಯಲ್ಲಿ ಗಜಾನನ ಮಹಾ ಮಂಡಳಿ ಯವರು ಎಲ್ಲವನ್ನೂ ಬಿಟ್ಟು ಗಣೇಶ ಮೂರ್ತಿ ತಗೆದುಕೊಂಡು ಬಂದು ಪ್ರತಿಷ್ಠಾಪನೆ ಮಾಡಿದ್ದಾರೆ.

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಂಜುಮನ್ ಇಸ್ಲಾಂ ಸಂಸ್ಥೆಯ ನಿರ್ಧಾರ ದಿಂದಾಗಿ ಪ್ಲಾನ್ ಬದಲಾವಣೆ ಮಾಡಿ ಕೊಂಡ ಗಜಾನನ ಮಹಾಮಂಡಳಿ ಯವರು ಏಕಾಏಕಿ ಯಾಗಿ ಎಲ್ಲವನ್ನೂ ಬದಿಗಿಟ್ಟು ನಾಲ್ಕೈದು ಜನ ಸೇರಿಕೊಂಡು ಗಣಪತಿ ತಗೆದುಕೊಂಡು ಬಂದಿದ್ದಾರೆ

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲು ಹತ್ತಿದ್ದು ಹೀಗಾಗಿ ತೀರ್ಪು ತೀರ್ಮಾನ ಏನೇ ಬರಲಿ ಸಧ್ಯ ಹೈಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಈ ಒಂದು ತೀರ್ಮಾನ ಕೈಗೊಂಡು ಪ್ರತಿಷ್ಠಾಪನೆ ಮಾಡಿದರು

https://youtu.be/hCJFm1D0b84

ಗಣೇಶನ ಪ್ರತಿಷ್ಠಾಪನೆ ಸಮಯದಲ್ಲಿ ಬದಲಾವಣೆ ಮಾಡಿ ಬೆಳಿಗ್ಗೆ ಸರಳವಾಗಿ ಪ್ರತಿಷ್ಠಾಪನೆ ಮಾಡಿದರು ಮಧ್ಯಾನ್ಹ 1 ಗಂಟೆ ಬದಲು 7:30ಕ್ಕೆ ಗಣೇಶನ ಪ್ರತಿಷ್ಠಾಪನೆ ಮಾಡಿ ಕೊನೆಗೂ ಗೆಲುವು ಸಾಧಿಸಿದರು.ಮೂರು ಸಾವಿರ ಮಠ ದಿಂದ ನಡೆಯಬೇಕಿದ್ದ ಮೆರವಣಿಗೆ ರದ್ದು ಮಾಡಿ ನಾಲ್ಕು ಜನ ಸೇರಿಕೊಂಡು ಗಣಪತಿ ಮೂರ್ತಿ ಯನ್ನು ತಗೆದು ಕೊಂಡು ಬಂದು ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡಿದರು

ಈ ಮೂಲಕ ಈದ್ಗಾ ಮೈದಾನಕ್ಕೆ ಆಗಮಿಸಿದೆ ಗಣಪತಿ ಮೂರ್ತಿ.ಸಿಂಹಾಸನಾರೂಢ ಗಣಪತಿ ವಿರಾಜಮಾನ ಆಗಿರುವ ಮೂರ್ತಿ ಯಾಗಿದ್ದು ಉತ್ಸವ ಮೂರ್ತಿ ಬಿಟ್ಟು, ಸಣ್ಣ ಗಣಪತಿ ಮೂರ್ತಿ ಪ್ರತಿಷ್ಟಾಪನೆ ಮಾಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....