LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಗ್ರಾಮ ಪಂಚಾಯತ ಚುನಾವಣೆ – ನವಲಗುಂದದಲ್ಲಿ ತರಬೇತಿ ಕಾರ್ಯಕ್ರಮ

ನವಲಗುಂದ -

2ನೇ ಹಂತದಲ್ಲಿ ನಡೆಯಲಿರುವ ಗ್ರಾಮ ಪಂಚಾಯತ ಚುನಾವಣೆಗೆ ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ತರಭೇತಿ ಕಾರ್ಯಕ್ರಮ ನಡೆಯಿತು. ತಾಲೂಕಿನ ಗ್ರಾಮ ಪಂಚಾಯತ್ ಚುನಾವಣೆಗಳ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ನವಲಗುಂದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ 2ನೇ ಹಂತದ ತರಬೇತಿ ಜರುಗಿತು.

ನೋಡಲ್ ಅಧಿಕಾರಿಯಾಗಿರುವ ಆಹಾರ ಇಲಾಖೆಯ ಜಂಟಿನಿರ್ದೇಶಕ ಸದಾಶಿವ ಮರ್ಜಿ ಅವರು ಮಾದರಿ ನೀತಿ ಸಂಹಿತೆ, ಕೋವಿಡ್ ನಿಯಂತ್ರಣ ಕ್ರಮಗಳ ಪಾಲನೆ, ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕಾರ್ಯ, ಮತ ಎಣಿಕೆ ಮೊದಲಾದ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ತಹಶೀಲ್ದಾರ ನವೀನ್ ಹುಲ್ಲೂರ ಮಾತನಾಡಿ, ತಾಲೂಕಿನಲ್ಲಿ 91 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

32769 ಪುರುಷ, 30983 ಮಹಿಳೆ, ಇತರೆ 1 ಸೇರಿ 63753 ಮತದಾರರಿದ್ದಾರೆ. ಇವರಲ್ಲಿ 14 ಪುರುಷ ಮತ್ತು 258 ಮಹಿಳಾ ಸೇವಾ ಮತದಾರರಿದ್ದಾರೆ. 72 ಸಾಮಾನ್ಯ ಮತಗಟ್ಟೆಗಳು, 8 ಸೂಕ್ಷ್ಮ, 11 ಅತೀಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಚುನಾವಣೆ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಎಲ್ಲ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಾಂಬಳೆ, ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ್ ಪದಕಿ, ಪೊಲೀಸ್ ಇನ್ಸ್ಪೇಕ್ಟರ್ ಚಂದ್ರಶೇಖರ್ ಮಠಪತಿ ಸೇರಿದಂತೆ ಹಲವು ಅಧಿಕಾರಿಗಳು ಸಿಬ್ಬಂದಿ ವರ್ಗದವರು ಮತ್ತಿತರರು ತರಭೇತಿ ಕಾರ್ಯಾಕ್ರಮದಲ್ಲಿ ಪಾಲ್ಗೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....