LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ JDS ಅಭ್ಯರ್ಥಿಗಳ ಪಟ್ಟಿ ಪ್ರಕಟ.....

ಧಾರವಾಡ -

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯ ವಿಚಾರ ಕುರಿತು BJP ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬೆನ್ನಲ್ಲೇ ಇತ್ತ JDS ಪಕ್ಷವೂ ಕೂಡಾ ಮೊದಲನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಹೌದು ಪಕ್ಷದ ಜಿಲ್ಲಾ ಅಧ್ಯಕ್ಷ ಗುರುರಾಜ ಹುಣಸಿಮರದ, ಮಾಜಿ ಶಾಸಕ ಎನ್ ಹೆಚ್ ಕೊನರಡ್ಡಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿನ ಒಟ್ಟು 82 ವಾರ್ಡಗಳಲ್ಲಿ ಪಕ್ಷದಿಂದ ಅಭ್ಯರ್ಥಿ ಗಳ‌ನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದ್ದು ಮೊದಲ ಹಂತದ 19 ಅಭ್ಯರ್ಥಿಗಳ ಪಟ್ಟಿಯನ್ನು ಧಾರವಾಡದಲ್ಲಿ ಬಿಡುಗಡೆ ಮಾಡಲಾಯಿತು

ಅತಿ‌ದೊಡ್ಡ ಮಹಾನಗರ ಪಾಲಿಕೆ ಇದಾಗಿದ್ದು ಜೆಡಿಎಸ್ ಪಕ್ಷದ ವತಿಯಿಂದ ಹು-ಧಾ ಮಹಾನಗರ ಅಧ್ಯಕ್ಷರಾದ ಗುರುರಾಜ ಹುಣಸಿಮರದ ಅವರೊ ಡನೆ ಜಂಟಿಯಾಗಿ ತಯಾರಿಸಿದ ಮೊದಲನೇಯ ಪಟ್ಟಿಯಲ್ಲಿ 19 ಅಭ್ಯರ್ಥಿಗಳನ್ನು ಅಂತಿಮ ಮಾಡಿ ಧಾರವಾಡದಲ್ಲಿ ಹು-ಧಾ ಮಹಾ ನಗರ ಅಧ್ಯಕ್ಷರೊ ಡನೆ ಜಂಟಿಯಾಗಿ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.

ಧಾರವಾಡ 71 ನೇ ವಿಧಾನ ಸಭಾ ಕ್ಷೇತ್ರದಲ್ಲಿ, ಹಾಗೆ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 9 ವಾರ್ಡ್ ಗಳಿಗೆ ಪಕ್ಷದ ಅಭ್ಯರ್ಥಿ ಗಳನ್ನು ಘೋಷಣೆ ಮಾಡಲಾಗಿದೆ.

ಇನ್ನೂ ಇದರೊಂದಿಗೆ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನ ಸಭಾ ಕ್ಷೇತ್ರದಲ್ಲಿ 7 ವಾರ್ಡ್ ಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ

ಇದರೊಂದಿಗೆ ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನ ಸಭಾ ಕ್ಷೇತ್ರದಲ್ಲಿ ಎರಡು ವಾರ್ಡ್ ಗಳಿಗೂ ಹೆಸರನ್ನು ಘೋಷಣೆ ಮಾಡಲಾಗಿದೆ.ಒಟ್ಟಾರೆ ಅವಳಿ ನಗರದ ಒಟ್ಟು 82 ವಾರ್ಡ್ ಗಳಲ್ಲಿ 19 ವಾರ್ಡ್ ಗಳಿಗೆ ಹುರಿಯಾಳುಗಳನ್ನು ಘೋಷಣೆ ಮಾಡಲಾಗಿದೆ.

ಈ ಒಂದು ಸಮಯದಲ್ಲಿ ಗುರುರಾಜ ಹುಣಸಿ ಮರದ, ಎನ್ ಹೆಚ್ ಕೊನರಡ್ಡಿ, ರಾಜು ಅಂಬೊರೆ, ಸಚಿನ,ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....