LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕುಂದಗೋಳ ದಲ್ಲಿ M R ಪಾಟೀಲ ರಿಗೆ ಸಿಗುತ್ತಿದೆ ಜನಬೆಂಬಲ - ಬದಲಾವಣೆ ಬಯಸಿ MRP ಯವರೇ ಈ ಬಾರಿ ನಮ್ಮ ಶಾಸಕರು ಎನ್ನುತ್ತಿದ್ದಾರೆ ಮತದಾರರು.....

ಕುಂದಗೋಳ -

ಎಮ್.ಆರ್.ಪಾಟೀಲ್'ಗೆ ಕುಂದಗೋಳ ಕ್ಷೇತ್ರದಲ್ಲಿ ಕಂಡು ಬರುತ್ತಿದೆ ಅಭೂತಪೂರ್ವ ಜನಬೆಂಬಲ

ಹೌದು ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಕುಂದಗೋಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಮ್.ಆರ್. ಪಾಟೀಲ್'ಗೆ ಜನರು ಭರ್ಜರಿಯಾಗಿ ಸ್ವಾಗತಿಸಿ ದ್ದಾರೆ.ಹೌದು ಪ್ರಚಾರದ ವೇಳೆ ಬೃಹತ್ ಸೇಬು ಹಣ್ಣಿನ ಮಾಲೆ,ಹೂ ಮಳೆ ಸುರಿಸಿ ಕ್ಷೇತ್ರಗಳಲ್ಲಿ ಜನರು ತಮ್ಮ ಗ್ರಾಮಕ್ಕೆ ಅದ್ದೂರಿ ಸ್ವಾಗತ ಕೋರುತ್ತಿರುವ ಚಿತ್ರಣ ಕಂಡು ಬಂದಿತು‌.

ಕ್ಷೇತ್ರದ ಯಲಿವಾಳ, ಅದರಗುಂಚಿ, ನೂಲ್ವಿ, ಹಿರೇಹರಕುಣಿ ಗ್ರಾಮಗಳಲ್ಲಿ ಎಮ್.ಆರ್ .ಪಾಟೀಲ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿ, ಈ ಹಿಂದೆ ಕಾಂಗ್ರೆಸ್ ಶಾಸಕರ ಅವಧಿಯಲ್ಲಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ,ರೈತರಿಗೆ ನೆರವಾಗುವ ಕೆಲಸ ಮಾಡಲಿಲ್ಲ.ಜನ ಬದಲಾಗಿದ್ದಾರೆ. ಬುದ್ದಿವಂತರಾ ಗಿದ್ದಾರೆ ಎಂದರು.

ಯಾವುದು ಸತ್ಯ ಎನ್ನುವ ತೀರ್ಮನ ಮಾಡುವ ಪ್ರಬುದ್ದತೆ ಕುಂದಗೋಳ ಕ್ಷೇತ್ರದ ಮತದಾರರಿಗೆ ಇದೆ. ಈ ಬಾರಿ ಕ್ಷೇತ್ರ ಹಸ್ತ ಮುಕ್ತವಾಗುವುದು ಖಚಿತ ಎಂದು ಹೇಳಿದರು.ಈ ಭಾಗದಲ್ಲಿ ಅಭಿವೃದ್ಧಿ, ಸಾಮಾಜಿಕ ನ್ಯಾಯದ ತಳಹದಿಗೆ ಜಯ ಸಿಗಲಿದೆ. ಅಂತಹ ಪ್ರಜ್ಞಾವಂತ ಹೃದಯ ವಂತರನ್ನು ಹೊಂದಿರುವ ತಾಲೂಕು ನಮ್ಮದು. ಅಭಿವೃದ್ಧಿ ಎಂಬ ಒಂದೇ ಮಂತ್ರದ ಮೇಲೆ ಸಾಗುತ್ತಿದ್ದೇನೆ.

ಇದಕ್ಕೆ ತಮ್ಮೇಲ್ಲರ ಸಹಕಾರ ಮುಖ್ಯ. ನನ್ನ ಮೇಲೆ ವಿಶ್ವಾಸ ಇಟ್ಟು ಅತ್ಯಧಿಕ ಮತಗಳನ್ನು ನೀಡಿ ಆಯ್ಕೆ ಮಾಡಿದರೇ ನಿಮ್ಮ ಸೇವಕನಾಗಿ ಕ್ಷೇತ್ರದ ಪ್ರಗತಿಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.

ಮುಂದುವರೆದು ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಸಮೃದ್ದಿ ಮಾಡಬೇಕೆಂಬ ಪರಿಕಲ್ಪನೆಯಿಂದ ಸಾಗುತ್ತಿದ್ದೇನೆ. ಅದಕ್ಕಾಗಿ ನಿಮ್ಮ ಸೇವಕನಾಗಿ ಮತಗಳ ರೂಪದಲ್ಲಿ ಆರ್ಶೀವಾದ ಕೇಳಲು ಬಂದಿದ್ದೇನೆ.ಆರ್ಶೀವಾದ ರೂಪದಲ್ಲಿ ಮತ ನೀಡಿ ಹಾರೈಸಿ ಎಂದು ವಿನಂತಿ ಸಿದರು.

ಈ ಸಂದರ್ಭದಲ್ಲಿ ಡಿ ವಾಯ್ ಲಕ್ಕನಗೌಡ್ರ ಎನ್ ಎನ್ ಪಾಟೀಲ ಪ್ರಕಾಶಗೌಡ ಪಾಟೀಲ ರಂಗನ ಗೌಡ ಪಾಟೀಲ ಮಾಲತೇಶ ಶಾಗೂಟ್ಟಿ ಬಸವ ರಾಜ ವಾಯ್ ಸಿ ಕುಮಾರಗೌಡರ ಮುಂತಾದ ಪ್ರಮುಖರು ಇದ್ದರು.

ಸುದ್ದಿ ಸಂತೆ ನ್ಯೂಸ್ ಕುಂದಗೋಳ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....