LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವಾರ್ಡ್ 1 ರಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಪರ ಶಿವಲೀಲಾ ವಿನಯ ಕುಲಕರ್ಣಿ ಮತಯಾಚನೆ ಪ್ರಚಾರಕ್ಕೆ ಆನೆ ಬಂತು ವಾರ್ಡ್ ನಲ್ಲಿ....

ಧಾರವಾಡ -

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ 1 ರಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಪರ ಸಾಕಷ್ಟು ಒಲವು ಕಂಡು ಬರುತ್ತಿದೆ.ಇವರೊಬ್ಬರು ಸರಳ ಸಜ್ಜನಿಕೆಯ ಅಭ್ಯರ್ಥಿ ಮೇಲಾಗಿ ನಮ್ಮವರೇ ಎಂದುಕೊಂಡು ಆರಂಭದಿಂದಲೂ ನಿರ್ಮಲಾ ಹೊಂಗಲ ಅವರನ್ನು ಬೆಂಬಲಿಸುತ್ತಾ ಬಂದಿರುವ ವಾರ್ಡ್ 1 ಜನರು ಈ ಬಾರಿ ಇವರೇ ಬಾಸ್ ಎನ್ನುತ್ತಿದ್ದಾರೆ.

ಇದರ ನಡುವೆ ಪಕ್ಷದ ಅಭ್ಯರ್ಥಿ ಪರವಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ವಿನಯ ಕುಲಕರ್ಣಿ ಅವರು ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.ಇಂದು ವಾರ್ಡ್ 1 ರಲ್ಲಿ ಪಕ್ಷದ ಅಭ್ಯರ್ಥಿ ನಿರ್ಮಲಾ ಮಲ್ಲಿಕಾರ್ಜುನ ಹೊಂಗಲ ಪರ ಮೊದಲು ಈಶ್ವರ ದೇವಸ್ಥಾನದಲ್ಲಿ ವಿಶೇಷ ವಾದ ಪೂಜೆಯನ್ನು ಸಲ್ಲಿಸಿದ ಅವರು ಗೆಲುವಿಗಾಗಿ ಪ್ರಾರ್ಥನೆಯನ್ನು ಮಾಡಿದರು.

ನಂತರ ಅಲ್ಲಿಂದ ಆರಂಭಗೊಂಡ ಪ್ರಚಾರದ ಯಾತ್ರೆ ವಾರ್ಡ್ ನ ಹಲವೆಡೆ ಪಾದಯಾತ್ರೆ ಮೂಲಕ ತೆರಳಿದರು.ಮನೆ ಮನೆಗೆ ತೆರಳಿ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದರು.

ಪ್ರಮುಖವಾಗಿ ಈ ಹಿಂದೆ ಕ್ಷೇತ್ರದಲ್ಲಿ ವಿನಯ ಕುಲಕರ್ಣಿ ಅವರು ಶಾಸಕರಾಗಿದ್ದ ಅದರಲ್ಲೂ ಸಚಿವರಾಗಿದ್ದ ಸಮಯದಲ್ಲಿ ವಾರ್ಡ್ ನಲ್ಲಿ ಮಾಡಿದ ಕೈಗೊಂಡ ಕೆಲಸ ಕಾರ್ಯಗಳನ್ನು ಮತದಾರರ ಮುಂದೆ ಇಟ್ಟು ಮತವನ್ನು ಕೇಳಿದರು.

ವಾರ್ಡ್ ನಲ್ಲಿ ನೀವು ಕೂಡಾ ಬದಲಾವಣೆ ಬಯ ಸಿದ್ದು ಸಂತೋಷದ ವಿಚಾರ ಅದು ನಮ್ಮ ಪಕ್ಷದ ಅಭ್ಯರ್ಥಿಯಿಂದಲೇ ಆಗಲಿ ಇದೊಂದು ಬಾರಿ ನಿರ್ಮಲಾ ಹೊಂಗಲ ಅವರಿಗೆ ಮತವನ್ನು ಹಾಕಿ ನಿಮ್ಮ ಸೇವೆಗೆ ಅವಕಾಶವನ್ನು ನೀಡಿ ಎಂದು ಕೇಳಿಕೊಂಡರು.

https://youtu.be/RHXoZzJyKfc

ಇವರೊಂದಿಗೆ ಪಕ್ಷದ ಕಾರ್ಯಕರ್ತರು ಮುಖಂಡರು ಅಭಿಮಾನಿಗಳು ಆಪ್ತರು ಸೇರಿದಂತೆ ಹಲವರು ಪಾಲ್ಗೊಂಡು ಇವರೊಂದಿಗೆ ಪಾದಯಾತ್ರೆ ಮಾಡುತ್ತಾ ಮತಯಾಚನೆಯನ್ನು ಮಾಡಿದರು.

ಇದರೊಂದಿಗೆ ಶಿವಲೀಲಾ ವಿನಯ ಕುಲಕರ್ಣಿ ಅವರು ವಾರ್ಡ್ ನಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಅಬ್ಬರದ ಮತಯಾಚನೆ ಮಾಡಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....