LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹೆಡ್ ಕಾನ್ಸ್‌ಟೇಬಲ್ ಗೆ ಜೈಲು ಶಿಕ್ಷೆ ಲಂಚ ಪಡೆದ ಪ್ರಕರಣ ದಲ್ಲಿ ನಾಲ್ಕು ವರ್ಷ ಜೈಲು.....

ಬೆಂಗಳೂರು -

ಪ್ರಕರಣವೊಂದರಲ್ಲಿ ಬಂಧಿತರಾಗಿದ್ದ ಆರೋಪಿಯ ದ್ವಿಚಕ್ರ ವಾಹನ ಬಿಡುಗಡೆಗೆ ₹10,000 ಲಂಚ ಪಡೆದ ಆರೋಪದ ಪ್ರಕರಣದಲ್ಲಿ ನಗರದ ಬಾಗಲ ಗುಂಟೆ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಮಂಜಣ್ಣ ಎಂ.ಕೆ. ದೋಷಿ ಎಂದು ಸಾರಿರುವ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ, ಅಪರಾಧಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು ₹ 1 ಲಕ್ಷ ದಂಡ ವಿಧಿಸಿದೆ.

ಹೌದು 2017ರ ಜುಲೈ ತಿಂಗಳಿನಲ್ಲಿ ಬಾಗಲಗುಂಟೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿತ್ತು.ಅವರ ಬೈಕ್‌ ಅನ್ನೂ ಪೊಲೀಸರು ವಶಪಡಿಸಿಕೊಂಡಿದ್ದರು. ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆ ಯಾಗಿದ್ದ ಆ ವ್ಯಕ್ತಿ, ತಮ್ಮ ಬೈಕ್‌ ಮರಳಿಸುವಂತೆ ಪೊಲೀಸರನ್ನು ಸಂಪರ್ಕಿಸಿದ್ದರು.ಬೈಕ್‌ ನೀಡಲು ₹ 20,000 ಲಂಚ ಕೊಡುವಂತೆ ಹೆಡ್‌ ಕಾನ್‌ಸ್ಟೆಬಲ್‌ ಮಂಜಣ್ಣ ಬೇಡಿಕೆ ಇಟ್ಟಿದ್ದರು.ಈ ಕುರಿತು ಬೈಕ್‌ ಮಾಲೀಕ ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು.2017ರ ಜುಲೈ 15ರಂದು ದೂರುದಾರರಿಂದ ₹ 10,000 ಲಂಚ ಪಡೆಯುತ್ತಿದ್ದ ಹೆಡ್‌ ಕಾನ್‌ಸ್ಟೆಬಲ್‌ ಬಂಧಿಸಿದ್ದ ಎಸಿಬಿ ಅಧಿಕಾರಿ ಗಳು 2018ರಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಮೂರು ವರ್ಷಗಳಿಂದಲೂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.ನಿನ್ನೆ ಈ ಒಂದು ಪ್ರಕರ ಣದ ವಿಚಾರಣೆಯನ್ನು ಪೂರ್ಣಗೊಳಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಮಂಜಣ್ಣ ದೋಷಿ ಎಂದು ಆದೇಶ ನೀಡಿದ್ದಾರೆ. ಅಪರಾಧಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು ₹ 1 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....