LIVE TV LocalCrimeNationalInternationalPoliticsEducationTechnologyEntertainmentSportsFeature
State News

ನೂತನ ಶಿಕ್ಷಣ ಸಚಿವರಿಗೆ ಸನ್ಮಾನಿಸಿ ಶಿಕ್ಷಕರ ಸಮಸ್ಯೆಗಳ ಕುರಿತು ಬೇಡಿಕೆಗಳನ್ನಿಟ್ಟ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ - ಡಾ.ಲತಾ.ಎಸ್.ಮುಳ್ಳೂರ ನೇತೃತ್ವದಲ್ಲಿ ಭೇಟಿಯಾದ ಟೀಮ್.....

ಬೆಂಗಳೂರು -

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕದಿಂದ ನೂತನ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಸನ್ಮಾನ ಹಾಗೂ ರಾಜ್ಯದ ಶಿಕ್ಷಕಿಯರ ಬೇಡಿಕೆಗಳ ಕುರಿತು ಮನವಿ ಅರ್ಪಿಸಲಾಯಿತು. ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡ ವತಿಯಿಂದ ಈ ಒಂದು ಕಾರ್ಯಕ್ರಮ ನಡೆಯಿತು

ಡಾ.ಲತಾ.ಎಸ್.ಮುಳ್ಳೂರ ಸಂಸ್ಥಾಪಕ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನೂತನ ಶಿಕ್ಷಣ ಸಚಿವರಾದ ಮಾನ್ಯ ಮಧು ಬಂಗಾರಪ್ಪನವರನ್ನು ಅವರ ನಿವಾಸದಲ್ಲಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಡಾ.ಲತಾ .ಎಸ್.ಮುಳ್ಳೂರ ಅವರು ಮಾತನಾಡಿ ಶಿಕ್ಷಕಿಯರ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.ಹೆಚ್ಚುವರಿ,ಕೋರಿಕೆ ವರ್ಗಾವಣೆಯಲ್ಲಿ ಸೂಕ್ತ ಅವಕಾಶ,ಪರಸ್ಪರ ವರ್ಗಾವಣೆ ಗೆ ಅವಕಾಶ PST ಶಿಕ್ಷಕರಿಗೆ ಬಡ್ತಿ

ಹಳೆ ಪಿಂಚಣಿ ಯೋಜನೆ ಜಾರಿ ನಲಿ-ಕಲಿ ತರಗತಿ 1 ಹಾಗೂ 2 ತರಗತಿ ಗೆ ಮಾತ್ರ ಸೀಮಿತ ಮಾಡ ಬೇಕು ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯನ್ನು ಶಿಕ್ಷಕಿಯರ ದಿನಾಚರಣೆ ಯಾಗಿ ಆಚರಿಸಲು ಸರ್ಕಾರದಿಂದ ಆದೇಶ ಮಾಡಿಸಲು ಮನವಿ ಮಾಡಿದರು

ನಿಯಮಿತವಾಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ಪೂರೈಕೆ ಹಾಗೂ ಶಿಕ್ಷಕಿಯರ ತಂದೆ ತಾಯಿಗೂ ಜ್ಯೋತಿ ಸಂಜೀವಿನಿ ಅನ್ವಯಿಸಬೇಕು.ಹಾಗೂ ಒಂದು ಬಾರಿ ಶಿಕ್ಷಕಿಯರು ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆಯಾಗಿ ಹೋಗಲು ವರ್ಗಾವಣೆ ಕಾಯ್ದೆಯಲ್ಲಿ ಅನುಕೂಲ ಮಾಡಿಕೊಡಬೇಕು ಎಲ್ಲ ವಿಧವಾ ಶಿಕ್ಷಕಿಯರಿಗೆ ಹಾಗೂ. ಮಾರಣಾಂ ತಿಕ ಕಾಯಿಲೆ ಇರುವವರಿಗೆ ಹೆಚ್ಚುವರಿಯಲ್ಲಿ ವಿನಾಯತಿ ನೀಡಬೇಕು

ಇನ್ನೂ ಮುಂತಾದ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿದರು ಸಚಿವರು ಮನವಿಯನ್ನು ಸ್ವೀಕರಿಸಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.ಶ್ರೀಮತಿ ರಾಜೇಶ್ವರಿ ಸಜ್ಜೇಶ್ವರ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಶ್ರೀಮತಿ ಅನಸೂಯಾದೇವಿ ರಾಜ್ಯ ಹಿರಿಯ ಉಪಾಧ್ಯಕ್ಷರು

ಶ್ರೀಮತಿ ಮಮತಾ ಬಂಗಾರಪೇಟ ರಾಜ್ಯ ಪದಾಧಿಕಾರಿಗಳು ರಾಮನಗರ ಜಿಲ್ಲಾಧ್ಯಕ್ಷರಾದ ಶ್ರೀಮತಿ ಡಾ.ರತ್ನಮ್ಮ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಭಾವತಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀಮತಿ ತೇಜೋವತಿ.ಕೆ.ಎಂ, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಜಯಶ್ರೀ

ಉಪಾಧ್ಯಕ್ಷರಾದ ಶ್ರೀಮತಿ ಕೆ.ಜಯಶ್ರೀ ಶ್ರೀಮತಿ ಅನ್ನಪೂರ್ಣ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ರಾದ ಶ್ರೀಮತಿ ಮುನಿಯಮ್ಮ, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸುಮಲತಾ,ಖಜಾಂಚಿ ಶ್ರೀಮತಿ ಸವಿತಾ ದೊಡ್ಡಬಳ್ಳಾಪುರ ತಾಲೂಕಿನ ಅಧ್ಯಕ್ಷರಾದ ಶ್ರೀಮತಿ ಮಂಜುಳಾ.ಎನ್.ವಿ, ಸಂಘಟನಾ ಕಾರ್ಯದರ್ಶಿ

ಶ್ರೀಮತಿ ನಂದಿನಿ, ತುಮಕೂರು ತಾಲ್ಲೂಕು ಅಧ್ಯಕ್ಷರಾದ ಶ್ರೀಮತಿ ಸಿದ್ದಮ್ಮ ಸೇರಿದಂತೆ ಸಂಘದ ಸರ್ವ ಸದಸ್ಯರು ಹಲವರು ಉಪಸ್ಥಿತರಿದ್ದು ಮೆರಗು ನೀಡಿದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....