LIVE TV LocalCrimeNationalInternationalPoliticsEducationTechnologyEntertainmentSportsFeature
Local News

ನೆರೆ ಪರಿವಾರದಲ್ಲಿ ಅವ್ಯವಹಾರ - ನೌಕರರ ತಲೆದಂಡ - ಶಾಸಕ ಅಮೃತ ದೇಸಾಯಿ ದೂರಿನಿಂದ ಅಮಾನತು

ಧಾರವಾಡ - ನೆರೆ ಪರಿಹಾರ ವಿತರಣೆಯಲ್ಲಿ ಅವ್ಯವಹಾರ ಮಾಡಿದ ಆರೋಪದ ಮೇಲೆ ಧಾರವಾಡದಲ್ಲಿ ನಾಲ್ಕು ಜನ ಸರ್ಕಾರಿ ನೌಕರರನ್ನು ಅಮಾನತು ಮಾಡಲಾಗಿದೆ.ಹೌದು ಧಾರವಾಡದಲ್ಲಿ ಈ ಒಂದು ಪ್ರಕರಣ ನಡೆದಿದೆ. ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಈ ಹಿಂದೆ ಬಿದ್ದ ಮನೆಗಳಿಗೆ ಪರಿಹಾರ ವಿತರಣೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಗೋಲ್ ಮಾಲ್ ನಡೆಯುತ್ತಿತ್ತು. ಶಾಸಕರಾದ ಅಮೃತ ದೇಸಾಯಿ ಅವರ ಕ್ಷೇತ್ರದಲ್ಲಿನ ನೆರೆ ಪರಿಹಾರದಲ್ಲಿ ಬಿದ್ದ ಮನೆಗಳಿಗೆ ಪರಿಹಾರ ಧನ ವಿತರಣೆ ಮಾಡುವಲ್ಲಿ ಸಾರ್ವಜನಿಕರಿಂದ ಅಧಿಕಾರಿಗಳು ಹಣವನ್ನು ತಗೆದುಕೊಳ್ಳುವ ಕುರಿತಂತೆ ದೂರುಗಳು ಕೇಳಿ ಬಂದಿದ್ದವು.ಸಾಕಷ್ಟು ಹಣ ತಗೆದುಕೊಂಡು ಪರಿಹಾರ ನೀಡುತ್ತಿದ್ದಾರೆಂದು ಸಾರ್ವಜನಿಕರ ಅಸಮಾಧಾನದಿಂದ. ಇದನ್ನು ಗಂಭೀರವಾಗಿ ತಗೆದುಕೊಂಡು ಶಾಸಕರಾದ ಅಮೃತ ದೇಸಾಯಿ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡಿದ್ದರು. ಅಲ್ಲದೇ ಶಿಸ್ತುಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದರು.

ತಪ್ಪು ಮಾಡಿರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಪತ್ರವೊಂದನ್ನು ಬರೆದಿದ್ದರು. ಇದನ್ನು ಗಂಭೀರವಾಗಿ ತಗೆದುಕೊಂಡಿರುವ ಜಿಲ್ಲಾಧಿಕಾರಿಗಳು ಗರಗ ಕಂದಾಯ ನೀರಿಕ್ಷಕ ಎನ್ ಎಸ್ ಪಟ್ಟೇದ , ಮುಳಮುತ್ತಲ ಗ್ರಾಮ ಲೆಕ್ಕಾಧಿಕಾರಿ ರಾಕೇಶ ಪಾಟೀಲ್, PDO ವಾಲಿಕಾರ್ ಅವರನ್ನು ಜಿಲ್ಲಾಧಿಕಾರಿ ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಹಾಗೇ ಈ ಒಂದು ಕಮೀಟಿಯಲ್ಲಿದ್ದ ಇನ್ನೊರ್ವ ಬೇರೆ ಇಲಾಖೆಯ ಅಧಿಕಾರಿಯೊಬ್ಬರು ಮಾಡಿರುವ ತಪ್ಪಿನ ಕುರಿತಂತೆ ಜಿಲ್ಲಾಧಿಕಾರಿಗಳು ಆ ಇಲಾಖೆಗೆ ಪತ್ರವೊಂದನ್ನು ಬರೆದಿದ್ದಾರೆ.

ಶಾಸಕ ಅಮೃತ ದೇಸಾಯಿ

ಒಟ್ಟಾರೆ ಬಿದ್ದ ಮನೆಗಳಿಗೆ ಪರಿಹಾರ ನೀಡುವ ನೆಪದಲ್ಲಿ ಹಣ ತೆಗೆದುಕೊಂಡು ಸಾರ್ವಜನಿಕರ ಆಕ್ರೋಶಕ್ಕೇ ಗುರಿಯಾಗಿದ್ದ ಕಂದಾಯ ಇಲಾಖೆಯ ಮೂವರು ಅಧಿಕಾರಿಗಳ ತಲೆದಂಡವಾಗಿದ್ದು ಮುಂದೆ ತನಿಖೆಯ ನಂತರ ಏನೇಲ್ಲಾ ಕ್ರಮಗಳಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಾರೆ ಜನರ ನೋವಿಗೆ ಸ್ಪಂದಿಸಿದ ಶಾಸಕ ಅಮೃತ ದೇಸಾಯಿ ಯವರಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....