LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಶಾಲಾ ಆವರಣದಲ್ಲಿ ಮೊಬೈಲ್ ಟವರ್ - ಆರೋಗ್ಯದ ಆತಂಕದಲ್ಲಿ ಶಾಲಾ ವಿದ್ಯಾರ್ಥಿಗಳು.....

ತುಮಕೂರು -

ಶಾಲಾ ಆವರಣದಲ್ಲಿ ಮೊಬೈಲ್‌ ಟವರ್‌ ಅಳವಡಿಸಿರುವ ಘಟನೆ ತುಮಕೂರು  ತಾಲ್ಲೂಕಿನ ಊರ್ಡಿಗೆರೆ ಹೋಬಳಿ ಸಾತಘಟ್ಟ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬೆಳಕಿಗೆ ಬಂದಿದೆ.

ಶಾಲಾ ಆವರಣದಲ್ಲಿ ಮೊಬೈಲ್‌ ಟವರ್‌ ಅಳವಡಿಸಿದ್ದು ಇದು ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.ಟವರ್ ನಿರ್ಮಿಸಿರು ವುದಕ್ಕೆ ವಿದ್ಯಾರ್ಥಿಗಳು,ಪೋಷಕರು, ಸಾರ್ವಜ ನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.ತಕ್ಷಣ ತೆರವು ಮಾಡಬೇಕು.ಇದಕ್ಕೆ ಕಾರಣರಾದ, ನಿರ್ಮಾಣಕ್ಕೆ ಅನುಮತಿ ನೀಡಿದ ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ಕ್ರಮ ಕೈಗೊಳ್ಳ ಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.

ಸಾತಘಟ್ಟದಲ್ಲಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಕನ್ನಡ ಕಿರಿಯ ಪ್ರಾಥಮಿಕ ಶಾಲೆ, ಅಂಗನವಾಡಿ ಕೇಂದ್ರ ಇರುವ ಮೈದಾನ ದಲ್ಲಿ ಟವರ್‌ ನಿರ್ಮಿಸಲಾಗಿದೆ.ಸುಮಾರು 100ಕ್ಕೂ ಹೆಚ್ಚು ಮಕ್ಕಳು ಇಲ್ಲಿ ಕಲಿಯುತ್ತಿದ್ದಾರೆ. ಮೊಬೈಲ್‌ ಟವರ್‌ ಮಕ್ಕಳ ಆರೋಗ್ಯ ತಿನ್ನುತ್ತಿದೆ. ಟವರ್‌ ಹೊರಸೂಸುವ ವಿಕಿರಣವು ಮಕ್ಕಳ ಜತೆಗೆ ಶಾಲೆಯ ಸುತ್ತಮುತ್ತಲಿನ ನಿವಾಸಿಗಳ ನೆಮ್ಮದಿ ಹಾಳು ಮಾಡುತ್ತಿದೆ ಎಂದು ಪೋಷಕರು ದೂರಿದ್ದಾರೆ.

ಜನ ವಸತಿ ಪ್ರದೇಶದಲ್ಲಿ ಟವರ್‌ ಅಳವಡಿಸಬಾ ರದು ಎಂದು ಗೊತ್ತಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಟವರ್‌ ತೆರವಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾರೊಬ್ಬರೂ ಕಿವಿಗೆ ಹಾಕಿಕೊಂಡಿಲ್ಲ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಶಾಲೆಯ ಮುಖ್ಯ ಶಿಕ್ಷಕರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

ಮಕ್ಕಳ ಆರೋಗ್ಯ ರಕ್ಷಿಸಬೇಕಾದ ಅಧಿಕಾರಿಗಳೇ ಶಾಲಾ ಆವರಣದಲ್ಲಿ ಟವರ್‌ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ. ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವಂತೆ ಮಾಡುತ್ತಿದ್ದಾರೆ. ಈ ಬಗ್ಗೆ ಪೋಷಕರು ಧ್ವನಿ ಎತ್ತದಂತೆ ಒತ್ತಡ ತರುತ್ತಿದ್ದಾರೆ. ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಗ್ರಾಮದ ತಿಮ್ಮಯ್ಯ,ನಂಜಯ್ಯ, ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ಟವರ್‌ ನಿರ್ಮಿಸಿರುವುದನ್ನು ವಿರೋಧಿಸಿ ಗ್ರಾಮಸ್ಥರು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಅ. 10ರಂದು ಬೆಂಗಳೂರಿನ ಆಯೋಗದ ಕಚೇರಿಯಲ್ಲಿ ಈ ದೂರಿನ ವಿಚಾರಣೆ ನಡೆಯಲಿದೆ.

ಸುದ್ದಿ ಸಂತೆ ನ್ಯೂಸ್ ತುಮಕೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....