LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ…….. ಪ್ರತಿಭಟನೆ..... ಪ್ರತಿಭಟನೆ……….

ಧಾರವಾಡ -

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಲು ಸಾಲು ಪ್ರತಿಭಟನೆಗಳು ಕಂಡು ಬಂದವು. ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಲವು ಸಂಘಟನೆಗಳು ಜಿಲ್ಲಾಧಿಕಾರಿಗಳು ಪ್ರತಿಭಟನೆ ಮಾಡಿದರು.

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ವನ್ನು ಬೆಂಬಲಿಸಿ ನಗರದಲ್ಲಿ ಕರ್ನಾಟಕ ರೈತ ಸೇನಾ ಘಟಕದವರು ಪ್ರತಿಭಟನೆ ಮಾಡಿದರು.

ಸಂಘಟನೆಯ ರಾಜ್ಯ ಅಧ್ಯಕ್ಷ ಶಂಕರ ಅಂಬಲಿ ನೇತ್ರತ್ವದಲ್ಲಿ ಪ್ರತಿಭಟನೆ ಮಾಡಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿದರು.

ಇನ್ನೂ ಮತ್ತೊಂದೆಡೆ ಮಹಾತ್ಮಗಾಂಧಿ ಹುತಾತ್ಮ ದಿನ ಹಿನ್ನಲೆಯಲ್ಲಿ ಉಪವಾಸ ಸತ್ಯಾಗ್ರಹ ಮಾಡಲಾಯಿತು. ಹಿರಿಯ ನ್ಯಾಯವಾದಿ ಪಿ ಎಚ್ ನೀರಲಕೇರಿ ನೇತ್ರತ್ವದಲ್ಲಿ ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರಹವನ್ನು ಮಾಡಲಾಯಿತು.ಇದೇ ವೇಳೆ ದೆಹಲಿಯಲ್ಲಿನ ರೈತರ ಮೇಲಿನ ಹಿಂಸೆಯನ್ನು ಖಂಡಿಸಲಾಯಿತು.

ಇವರೊಂದಿಗೆ ಶ್ರೀಶೈಲಗೌಡ ಕಮತರ,ಫೀರೋಜ್ ಖಾನ್ ಹವಲ್ದಾರ,ಶಿವಾನಂದ ಹಾದಿಮನಿ. ಎಮ್ ಕೆ ಕಾಗಿನೆಲೆ,ಅಬ್ದುಲ್ ಖಾನ್ ಸೇರಿದಂತೆ ಹಲವರು ಹೋರಾಟಕ್ಕೆ ಸಾಥ್ ನೀಡಿದರು.

ಇನ್ನೂ ಮತ್ತೊಂದೆಡೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಮತ್ತೊಂದು ಹೋರಾಟವೂ ಕಂಡು ಬಂದಿತು. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಾಗೇ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೇಸ್ ಪಕ್ಷದ ಮುಖಂಡರು ಕಾರ್ಯಕರ್ತರು ಪ್ರತಿಭಟನೆ ಮಾಡಿದರು.

ಆನಂದ ಜಾಧವ ನೇತ್ರತ್ವದಲ್ಲಿನ ಕಾಂಗ್ರೇಸ್ ಪಕ್ಷದ ಮುಖಂಡರು ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಇವರು ಕೂಡಾ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖ್ಯವಾಗಿ ಹೇಮಂತ ಗುರ್ಲಹೊಸೂರ, ಮಂಜುನಾಥ ಭೋವಿ,ಶರಣಪ್ಪ ಕೊಟಗಿ,ನಾಗರಾಜ ಗುರಿಕಾರ,ಜಯಂತ ಸಾಗರ, ಆನಂದ ಮೂಶನ್ನವರ,ಬಸವರಾಜ ಮಲಕಾರಿ, ಆನಂದ ಸಿಂಗನಾಥ,ವಸಂತ ಅರ್ಕಚಾರಿ,ಸುಮಿತ್ರಾ ಕೋಟಕರ,ಕುಸುಮಾ ಜೈನ್,ರತ್ನಾ ಮೂಲಿಮನಿ, ಸೇರಿದಂತೆ ಹಲವರು ಈ ಒಂದು ಪ್ರತಿಭಟನೆಯಲ್ಲಿ ಹುಬ್ಬಳ್ಳಿ ಧಾರವಾಡ ನಗರ ಕಾಂಗ್ರೇಸ್ ಘಟಕದಲ ಹೋರಾಟದಲ್ಲಿ ಪಾಲ್ಗೊಂಡರು,

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....