LIVE TV LocalCrimeNationalInternationalPoliticsEducationTechnologyEntertainmentSportsFeature
State News

ದನದ ತಿವಿತಕ್ಕೆ ಶಿಕ್ಷಕ ಸಾವು - ರಾಜ್ಯಾದ್ಯಂತ ಸಾಕಷ್ಟು ಪ್ರಮಾಣದಲ್ಲಿ ಕೆಲಸ ಮಾಡಿದ್ದ ರಾಮಕೃಷ್ಣ ಸರ್ ಇನ್ನೂ ನೆನಪು ಮಾತ್ರ.....

ಕಾಸರಗೋಡು -

ದನದ ತಿವಿತಕ್ಕೆ ಶಿಕ್ಷಕರೋರ್ವರು ಮೃತಪಟ್ಟ ದಾರುಣ ಘಟನೆ ಚೆರ್ವತ್ತೂರಿನಲ್ಲಿ ನಡೆದಿದೆ. ಆನಿಕ್ಕೋಡಿ ನಿವಾಸಿ ಸಿ. ರಾಮಕೃಷ್ಣನ್ (54) ಮೃತರಾದ ಶಿಕ್ಷಕ ರಾಗಿದ್ದಾರೆ.ಚೆರ್ವತ್ತೂರು ಬಿಆರ್ ಸಿ ವಿಕಲಚೇತನ ವಿದ್ಯಾರ್ಥಿಗಳ ಸ್ಪೆಷಲ್ ಎಜುಕೇ ಟರ್ ಆಗಿದ್ದರು.ಮನೆಯ ಕೊಟ್ಟಿಗೆಯಲ್ಲಿ ದನಕ್ಕೆ ಆಹಾರ ನೀಡಲು ತೆರಳಿದ್ದ ಸಂದರ್ಭದಲ್ಲಿ ಹೊಟ್ಟೆ ಯ ಭಾಗಕ್ಕೆ ದನ ಕೊಂಬಿನಿಂದ ತಿವಿದ ಪರಿಣಾಮ ಗಂಭೀರ ಗಾಯಗೊಂಡ ರಾಮಕೃಷ್ಣನ್ ಅವರನ್ನು ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿ ಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ರಾಮಕೃಷ್ಣನ್ ಕೇರಳ ರಾಜ್ಯದುದ್ದಕ್ಕೂ ವಿಕಲಚೇ ತನ ಮಕ್ಕಳ ಕಲ್ಯಾಣಕ್ಕಾಗಿ ಸಾಕಷ್ಟು ಪ್ರಯತ್ನಿಸಿ ದ್ದರು.ಪರಿಸರ ಹೋರಾಟಗಾರರಾಗಿಯೂ ಗುರುತಿಸಿ ಕೊಂಡಿದ್ದರು.ಇನ್ನೂ ಮೊಗ್ರಾಲ್ ಪುತ್ತೂರು ಸರಕಾರಿ ಹಯರ್ ಸೆಕಂಡರಿ ಶಾಲೆಯಲ್ಲಿ 17 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು.ಈ ಅವಧಿಯಲ್ಲಿ ಮೊಗ್ರಾಲ್ ಪುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಕಲಚೇತನ ಮಕ್ಕಳ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದ್ದರು. ಮೃತರಾದ ಇವರ ನಿಧನಕ್ಕೆ ನಾಡಿ‌ನ ಮೂಲೆ ಮೂಲೆಗಳಿಂದ ಶಿಕ್ಷಕ ಬಂಧುಗಳು ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ಸೂಚಿಸಿದ್ದಾರೆ. ಅದರಲ್ಲೂ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪವಾಡೆಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಎಲ್ ಐ ಲಕ್ಕಮ್ಮನವರ,ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ,ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲಹೊಂಗಲ,ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣ ವರ ಶಿವಾನಂದ ಬೆಂಚಿಕೇರಿ,ಪ್ರವೀಣ ಪಾಳೇಕರ, ನೆಲಮಂಗಲ ಮಲ್ಲಿಕಾರ್ಜುನ,ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ,ಅಶೋಕ ಸಜ್ಜನ ಸೇರಿದಂತೆ ಹಲವರು ಭಾವಪೂರ್ಣ ನಮನ ಗಳೊಂದಿಗೆ ಸಂತಾಪ ಸೂಚಿಸಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....