LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯದ ಸರ್ಕಾರಿ ನೌಕರರ ಕುರಿತಂತೆ ಸಭೆ ಮಾಡಿದ ಷಡಾಕ್ಷರಿ ಯವರು - ರಾಜ್ಯ ಸರ್ಕಾರಿ ನೌಕರರ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ಮಾಡುತ್ತಿರುವ ರಾಜ್ಯಾಧ್ಯಕ್ಷರು.....

ಬೆಂಗಳೂರು -

ರಾಜ್ಯದ ಸರ್ಕಾರಿ ನೌಕರರ ಕುರಿತಂತೆ ಸಭೆ ಮಾಡಿದ ಷಡಾಕ್ಷರಿ ಯವರು - ರಾಜ್ಯ ಸರ್ಕಾರಿ ನೌಕರರ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ಮಾಡುತ್ತಿರುವ ರಾಜ್ಯಾಧ್ಯಕ್ಷರು ಹೌದು

ರಾಜ್ಯದ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡುವ ಕುರಿತಂತೆ ರಾಜ್ಯದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರ ನೇತ್ರತ್ವದಲ್ಲಿ ಮಹತ್ವದ ಸಭೆ ಯೊಂದು ನಡೆಯಿತು.ಹೌದು ಬೆಂಗಳೂರು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಜ್ಯಾಧ್ಯಕ್ಷರು ಅಧಿಕಾರಿಗಳೊಂದಿಗೆ ಈ ಒಂದು ಸಭೆಯನ್ನು ಮಾಡಿದರು.

2022-23ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪರಿಶೀಲನಾ ಸಭೆಯಾಗಿದ್ದು ಬೆಂಗಳೂರು ನಗರ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಅತ್ಯುನ್ನತ ಸೇವೆಗೈದ, ಸಾಧನೆಗೈದ ರಾಜ್ಯ ಸರ್ಕಾರಿ ನೌಕರರನ್ನು ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಆಯ್ಕೆ ಮಾಡುವ ಸಂಬಂಧ ಜಿಲ್ಲಾಧಿಕಾರಿ ಕೆ ಎ ದಯಾನಂದ ಇವರ ಅಧ್ಯಕ್ಷತೆಯಲ್ಲಿ ಈ ಒಂದು ಮಹತ್ವದ ಸಭೆಯನ್ನು ನಡೆಸಲಾಯಿತು.

ಈ ಸಭೆಯಲ್ಲಿ ಆಯ್ಕೆ ಸಮಿತಿಯ ಸದಸ್ಯರು ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಸಿ.ಎಸ್.ಷಡಾಕ್ಷರಿರವರು, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪಿ ಎಸ್ ಕಾಂತರಾಜು ಹಾಗೂ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿಯಾದ ಪುರುಷೋತ್ತಮ್ ಹಾಗೂ ಕೇಂದ್ರ ಸಂಘದ ಕಾರ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಳ್ಳಾರಿ ಹಿರಿಯ ಉಪಾಧ್ಯಕ್ಷ ರಾದ ರುದ್ರಪ್ಪ, ಎಸ್ ಬಸವರಾಜು ಉಪಾಧ್ಯಕ್ಷ ರಾದ ಗಿರಿಗೌಡ, ಸಿದ್ದೇಶ್ವರ ಮತ್ತು ರಾಜ್ಯ ಕಾರ್ಯ ದರ್ಶಿಯಾದ ಸದಾನಂದ ನೆಲ್ಕುದ್ರೆ ಹಾಗೂ ಚೇತನ,ಸೇರಿದಂತೆ ಹಲವು ಅಧಿಕಾರಿಗಳು ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....