LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪಾಠ ಮಾಡುತ್ತಿರುವಾಗಲೇ ಶಾಲೆಯಲ್ಲಿಯೇ ಶಿಕ್ಷಕನಿಗೆ ಹೃದಯಾಘಾತ - ಶಾಲೆಯಲ್ಲೇ ಶಿಕ್ಷಕ ಮಂಜುನಾಥ ಸಾವು.....

ಚಿಕ್ಕಬಳ್ಳಾಪುರ -

ಪಾಠ ಮಾಡುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ  ಶಾಲೆಯಲ್ಲೇ ಟೀಚರ್ ಸಾವು ಹೌದು ಇಂತಹ ದೊಂದು ಘಟನೆ ಚಿಕ್ಕಬಳ್ಳಾಪುರ ದಲ್ಲಿ ನಡೆದಿದೆ ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಪಾಠ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರು ಸಾವನ್ನಪ್ಪಿ ರುವ ಪ್ರಕರಣ ಬೆಳಕಿಗೆ ಬಂದಿದೆ.ಚಿಕ್ಕಬಳ್ಳಾಪುರದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಮೃತರನ್ನು ಟಿಕೆ ಮಂಜುನಾಥ್ (50) ಎಂದು ಗುರುತಿಸ ಲಾಗಿದೆ.

ಟಿ.ಕೆ ಮಂಜುನಾಥ್ ಕುರುಪಲ್ಲಿ ಸರ್ಕಾರಿ ಹಿರಿಯ ಪ್ರಾರ್ಥಮಿಕ ಪಾಠ ಶಾಲೆಯ ಶಿಕ್ಷಕರಾಗಿದ್ದರು. ಚಿಂತಾಮಣಿ ತಾಲೂಕಿನ ಮುರುಗಮಲ್ಲ ಹೋಬಳಿಯ ಕುರುಪಲ್ಲಿ ಗ್ರಾಮದಲ್ಲಿರೋ ಈ ಶಾಲೆಯಲ್ಲಿ ಇವತ್ತು ಮಂಜುನಾಥ್ ಪಾಠ ಮಾಡುತ್ತಿದ್ದರು. ಆಗ ಶಾಲೆಯಲ್ಲೇ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದ್ರೂ ಮಾರ್ಗಮಧ್ಯದಲ್ಲೇ ಪ್ರಾಣಪಕ್ಷಿ ಹಾರಿಹೋಗಿತ್ತು.

ಅತಿಯಾದ ಬೊಜ್ಜು, ಮಾಂಸ ಸೇವನೆ, ಮತ್ತು ಮದ್ಯಪಾನದಿಂದ ಸಾವು ಸಂಭವಿಸಿರುವ ಬಗ್ಗೆ ಅನುಮಾನವಿದೆ. ರೆಡ್ ಮೀಟ್ ಸೇವನೆಯಿಂದ ಕೊಲೆಸ್ಟ್ರಾಲ್ ಹೆಚ್ಚಾಗುವ ಸಾಧ್ಯತೆ ಇದೆ. ಅನ್ ಕಂಟ್ರೋಲ್ಡ್ ಕೊಲೆಸ್ಟ್ರಾಲ್​ನಿಂದ ಹೃದಯಾಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಹೃದಯಾಘಾತಕ್ಕೆ ಕೊವಿಡ್ -19 ಲಸಿಕೆ ಕಾರಣ ಅಲ್ಲ ಎಂದು ಜಯದೇವ ತಜ್ಞರು ವರದಿ ನೀಡಿದ್ದಾರೆ.

ಅತಿಯಾದ ತೂಕ, ಧೂಮಪಾನ ಮತ್ತು ಪಾಸ್ಟ್ ಫುಡ್ ಆಹಾರ ಸೇವನೆಯಿಂದ ಸಡನ್ ಡೆತ್ ಸಂಭವಿಸುತ್ತಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೀವನ ಶೈಲಿ, ಆಹಾರ ಪದ್ಧತಿ ಹಾಗೂ ಅನುವಂಶೀಯತೆ ಹೃದಯಘಾತಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ವರದಿ ಹೇಳಿದೆ.

ತಜ್ಞರು ಹೃದಯಾಘಾತಕ್ಕೆ ಮುಖ್ಯ ಕಾರಣಗಳನ್ನ ಪಟ್ಟಿ ಮಾಡಿ ತಿಳಿಸಿದ್ದಾರೆ. ಅತಿಯಾದ ತೂಕ, ರೆಡ್ ಮೀಟ್, ಮಧ್ಯಪಾನ, ಧೂಮಪಾನ ಮತ್ತು ಪಾಸ್ಟ್ ಫುಡ್ ಸೇವನೆ ಹೆಚ್ಚುತ್ತಿರೋದೆ ಹೃದಯಾಘಾತಕ್ಕೆ ಕಾರಣ ಎಂದು ಹೇಳಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಿಕ್ಕಬಳ್ಳಾಪುರ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....