LIVE TV LocalCrimeNationalInternationalPoliticsEducationTechnologyEntertainmentSportsFeature
State News

BRTS MD ಯಾಗಿ ಅಧಿಕಾರ ವಹಿಸಿಕೊಂಡ ಪ್ರೀಯಾಂಗ ಎಮ್ - ಸ್ವಾಗತ ಮಾಡಿಕೊಂಡ HDBRTS ಟೀಮ್.....

ಹುಬ್ಬಳ್ಳಿ -

BRTS MD ಯಾಗಿ ಅಧಿಕಾರ ವಹಿಸಿಕೊಂಡ ಪ್ರೀಯಾಂಗ ಎಮ್ - ಸ್ವಾಗತ ಮಾಡಿಕೊಂಡ HDBRTS ಟೀಮ್

ಹೌದು ಹುಬ್ಬಳ್ಳಿ ಧಾರವಾಡ ಬಿಆರ್ ಟಿಎಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಶ್ರೀಮತಿ ಪ್ರೀಯಾಂಗ ಎಮ್ ಅಧಿಕಾರವನ್ನು ವಹಿಸಿಕೊಂಡರು.ಸಧ್ಯ ವಾ.ಕ.ರ.ಸಾ.ಸಂಸ್ಥೆಯ ಶ್ರೀಮತಿ ಪ್ರೀಯಾಂಗ ಎಮ್ ಐ.ಎ.ಎಸ್. ವ್ಯವಸ್ಥಾಪಕ ನಿರ್ದೇಶಕರಾಗಿರುವ ಇವರಿಗೆ ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಕಂಪನಿ ವ್ಯವಸ್ಥಾಪಕ ನಿದೇಶಕರ ಹುದ್ದೆಯನ್ನು ಹೆಚ್ಚುವರಿಯನ್ನಾಗಿ ನೀಡಿ ಆದೇಶವನ್ನು ಮಾಡಿದೆ.

ರಾಜ್ಯ ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಅಧಿಕಾರ ವನ್ನು ಸ್ವೀಕಾರ ಮಾಡಿದರು.ಶ್ರೀಮತಿ ಪ್ರೀಯಾಂಗ ಎಮ್ ವ್ಯವಸ್ಥಾಪಕ ನಿರ್ದೇಶಕರು ವಾ.ಕ.ರ.ಸಾ ಸಂಸ್ಥೆ ಹುಬ್ಬಳ್ಳಿ. ಇವರಿಗೆ ವ್ಯವಸ್ಥಾಪಕ ನಿರ್ದೇಶಕರು, ಹೆಚ್‌ಡಿಬಿಆರ್‌ಟಿಎಸ್ ಕಂಪನಿಯ ಹೆಚ್ಚುವರಿ ಪ್ರಭಾರ ಹುದ್ದೆಯನ್ನು ನೀಡಲಾಗಿದೆ.ಬಿರ್ ಟಿಎಸ್ ಇಲಾಖೆಯ ವಿಶೇಷ ಭೂಸ್ವಾಧಿನಕಾರಿ ಶ್ರೀಮತಿ ಗೀತಾ ಹೊನಕೇರಿ ಅವರು ಶ್ರೀಮತಿ ಪ್ರೀಯಾಂಗ ಎಮ್ ವ್ಯವಸ್ಥಾಪಕ ನಿರ್ದೇಶಕರು ವಾ.ಕ.ರ.ಸಾ ಸಂಸ್ಥೆ ಇವರಿಗೆ ಹೂವಿನ ಗಿಡದ ಸಸಿ ನೀಡಿ ಸ್ವಾಗತಿಸಿದರು.

ಇನ್ನೂ ಈ ಹಿಂದೆ ಬಿಆರ್ ಟಿಎಸ್ ಆರಂಭವಾದಾ ಗಿನಿಂದ ವಾಯವ್ಯ ಸಾರಿಗೆ ಸಂಸ್ಥೆ ಮತ್ತು ಬಿಆರ್ ಟಿಎಸ್ ಎರಡು ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯನ್ನು ಒಬ್ಬ ಅಧಿಕಾರಿ ನೋಡಿಕೊಳ್ಳುತ್ತಿದ್ದರು.ಇದೇ ಮೊದಲ ಬಾರಿಗೆ ಈ ಹಿಂದೆ ಶಿವಾನಂದ ಭಜಂತ್ರಿ ಯವರು ಪ್ರತ್ಯೇಕವನ್ನಾಗಿ ಮಾಡಿ ಇದಕ್ಕೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.ಇವರು ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಸಧ್ಯ ಈ ಒಂದು ಜವಾಬ್ದಾರಿ ಯನ್ನು ಹೆಚ್ಚುವರಿಯಾಗಿ ಶ್ರೀಮತಿ ಪ್ರೀಯಾಂಗ ಎಮ್ ಅವರಿಗೆ ನೀಡಲಾಗಿದೆ.

ಅಧಿಕಾರವನ್ನು ವಹಿಸಿಕೊಂಡ ಬೆನ್ನಲ್ಲೇ ಬಿಆರ್ ಟಿಎಸ್ ಅಧಿಕಾರಿಗಳೊಂದಿಗೆ ಸಭೆಯನ್ನು ಮಾಡಿ ಕೆಲವೊಂ ದಿಷ್ಟು ವಿಚಾರಗಳ ಕುರಿತಂತೆ ಸಭೆಯನ್ನು ಮಾಡಿ ಮುಂದಿನ ಕೆಲಸ ಕಾರ್ಯಗಳ ಬಗ್ಗೆ ಡಿಸಿ ಯವರಿಗೆ ಸೇರಿದಂತೆ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದರು.ಈ ಒಂದು ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....