LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕೋವಿಡ್ ಪರಿಷ್ಕೃತ ಮಾರ್ಗ ಸೂಚಿಗಳು ಪ್ರಕಟ - ಹಬ್ಬ ಹರಿದಿನಗಳು ಸೇರಿದಂತೆ ಎಲ್ಲದಕ್ಕೂ ಬ್ರೇಕ್ ಹಾಕಿದ ರಾಜ್ಯ ಸರ್ಕಾರ.....

ಬೆಂಗಳೂರು‌ -

ಕೋವಿಡ್ ಎರಡನೆ ಅಲೆಯ ಪರಿಣಾಮ ಪ್ರಕರಣ ಗಳು ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಟಿಸಿದೆ ಈ ಹಿನ್ನೆಲೆಯಲ್ಲಿ ಯುಗಾದಿ, ಹೋಳಿ, ಶಬೇ ಬರಾಅತ್, ಗುಡ್ ಫ್ರೈಡೇ ಹಬ್ಬಗಳಿಗೆ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಗೂಡದಂತೆ ನಿಷೇಧವನ್ನು ಹೇರಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪರಿಷ್ಕೃತ ಮಾರ್ಗಸೂಚಿ ಪ್ರಕಟಿ ಸಿದ್ದು ಸಾರ್ವಜನಿಕ ಸ್ಥಳ ಮೈದಾನ, ಪಾರ್ಕ್ ಮಾರ್ಕೆಟ್ ಮತ್ತು ಪ್ರಾರ್ಥನಾ ಮಂದಿರಗಳಲ್ಲಿ ಹಬ್ಬಗಳ ಆಚರಣೆಯನ್ನು ನಿಷೇಧಿಸಿದೆ. ಆದೇಶ ವನ್ನು ಉಲ್ಲಂಘಿಸಿದರೆ ಎನ್‍ಡಿಎಂಎ ಕಾಯ್ದೆಯಡಿ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಅಗತ್ಯವಿದೆ.ಹೀಗಾಗಿ ಹಬ್ಬಗಳಂದು ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಗೂಡುವುದು ಸಾಮಾನ್ಯ. ಇದರಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಹಬ್ಬಗಳಂದು ಸಾರ್ವಜನಿಕವಾಗಿ ಗುಂಪು ಗೂಡುವಿಕೆಯನ್ನು ನಿರ್ಬಂಧಿಸಲಾಗಿದೆ.

ಹೊಸದಾಗಿ ಜಾರಿಗೆ ತಂದಿರುವ ಪರಿಷ್ಕೃತ ಮಾರ್ಗಸೂಚಿಯನ್ನು ಬಿಬಿಎಂಪಿ ಆಯುಕ್ತರು ಸೇರಿದಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸರಕಾರ ದ ಮುಖ್ಯ ಕಾರ್ಯದರ್ಶಿ ಆದೇಶ ಪತ್ರದಲ್ಲಿ ಸೂಚನೆ ನೀಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....