LIVE TV LocalCrimeNationalInternationalPoliticsEducationTechnologyEntertainmentSportsFeature
International News

ಮುಖ್ಯಶಿಕ್ಷಕನ ಮೇಲೆ ದೂರು ದಾಖಲು – ಅಮಾನತು ಮಾಡಿ ಆದೇಶ ಮಾಡಿದ ಮೇಲಾಧಿಕಾರಿ ಗಳು.....

ಲಖನೌ -

ಶಾಲೆಯಲ್ಲಿ ಎಲ್ಲರೊಂದಿಗೆ ಕೂಡಿಸದೇ ಪ್ರತ್ಯೇಕ ವಾಗಿ ದಲಿತ ಸಮಾಜದ ವಿದ್ಯಾರ್ಥಿಯೊಬ್ಬರನ್ನು ಕೂಡಿಸಿ ಊಟ ಮಾಡಿಸಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ.ಹೌದು ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ವನಪುರ್ವಾ ಗಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ.

ಈ ಶಾಲೆಯ ಮುಖ್ಯ ಶಿಕ್ಷಕ ಕುಸುಮ್ ಸೋನಿ, ಮಧ್ಯಾಹ್ನದ ಊಟದ ವೇಳೆ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಸರತಿ ಸಾಲಿನಲ್ಲಿ ಕೂರಿಸಿದ್ದರಂತೆ ಅಲ್ಲದೇ ವಿದ್ಯಾರ್ಥಿಗಳನ್ನು ಥಳಿಸಿ ದ್ದಾರಂತೆ.ಈ ಕುರಿತಂತೆ ವಿದ್ಯಾರ್ಥಿಗಳ ಪೋಷಕರು ಆರೋಪವನ್ನು ಮಾಡಿದ್ದರು ಇದರ ಬೆನ್ನಲ್ಲೇ ಮುಖ್ಯ ಶಿಕ್ಷಕನ ಮೇಲೆ ದೂರು ದಾಖಲಾಗಿತ್ತು ಅತ್ತ ದೂರು ದಾಖಲಾಗುತ್ತಿದ್ದಂತೆ ಇತ್ತ ಇವರನ್ನು ಅಮಾನತು ಮಾಡಲಾಗಿದೆ.

ಹೌದು ಶಿಕ್ಷಕ ಕುಸುಮ್ ಸೋನಿ ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ ಮತ್ತು ಊಟಕ್ಕೆ ಮೇಲ್ಜಾತಿ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸರತಿ ಸಾಲುಗಳನ್ನು ಮಾಡಿದ್ದರು ಎಂದು ದಲಿತ ಸಮುದಾಯಕ್ಕೆ ಸೇರಿದ ಪೋಷಕರು ಆರೋಪ ವನ್ನು ಮಾಡಿದ್ದರು.ಇನ್ನೂ ನಾನು ಎಲ್ಲರನ್ನೂ ಸಮಾನವಾಗಿ ನೋಡುತ್ತೇನೆ.ಎಲ್ಲಾ ವಿದ್ಯಾರ್ಥಿ ಗಳನ್ನು ಒಟ್ಟಿಗೆ ಕೂರಿಸಲಾಗಿದೆ.

ತಾನು ಹಳ್ಳಿಯ ಮುಖ್ಯಸ್ಥನ ಪ್ರತಿನಿಧಿ ಎಂದು ಹೇಳಿಕೊಂಡ ಪವನ್ ದುಬೆ ಎಂಬ ವ್ಯಕ್ತಿ ಇಲ್ಲಿಗೆ ಬಂದು ಎಲ್ಲರನ್ನು ಹೊರಗೆ ತಳ್ಳಿ,ಗೇಟ್‌ಗಳನ್ನು ಲಾಕ್ ಮಾಡಿ, ಶಾಲೆಯ ಚಿತ್ರಗಳನ್ನು ಕ್ಲಿಕ್ ಮಾಡಿ, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ನಾನು ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಶಿಕ್ಷಕರು ಹೇಳಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....