LIVE TV LocalCrimeNationalInternationalPoliticsEducationTechnologyEntertainmentSportsFeature
State News

ಉದ್ಯೋಗ ಕೊಡಿಸೋದಾಗಿ ವಂಚನೆ - KSRTC ಬಸ್ ಚಾಲಕ ಸೇರಿ ಇಬ್ಬರ ಬಂಧನ.....

ಬೆಂಗಳೂರು -

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸಂಚಾರಿ ನಿರೀಕ್ಷರ ಹುದ್ದೆ ಕೊಡಿಸುವುದಾಗಿ ನಂಬಿಸಿ ನೂರಾರು ಮಂದಿಯಿಂದ ಕೋಟ್ಯಂತರ ರೂ ವಂಚಿಸಿದ ಆರೋಪದ ಮೇಲೆ KSRTC ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾಗಡಿ ರಸ್ತೆ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಳ್ಳಾರಿ ಯ ಹಗರಿಬೊಮ್ಮನಹಳ್ಳಿ ಮೂಲದ ಮಂಜುನಾಥ್‌ ಬಿಲ್ಲಾ ನಾಯಕ್‌ (45) ಹಾಗೂ ಆತನ ಸ್ನೇಹಿತ ಅನಿಲ್‌ (41) ಬಂಧಿತರು. ಆರೋಪಿಗಳಾಗಿದ್ದಾರೆ. ಸುಮಾರು 500ಕ್ಕೂ ಅಧಿಕ ಮಂದಿಗೆ ಸುಮಾರು 15-18 ಕೋಟಿ ರೂ. ವಂಚಿಸಿ ದ್ದಾನೆಂತೆ.ಆತನ ಖಾತೆ ಪರಿಶೀಲಿಸಿದಾಗ ಸುಮಾರು 2.5 ಕೋಟಿ ರೂ. ಹಣ ಇರುವುದು ಪತ್ತೆಯಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳ ಪೈಕಿ ಮಂಜುನಾಥ್‌ ಬಿಲ್ಲಾ ನಾಯಕ್‌ ಕೆಎಸ್‌ಆರ್‌ಟಿಸಿ ಚಾಲಕನಾಗಿದ್ದು, ತನ್ನ ಸ್ನೇಹಿತರನ್ನು ಮಧ್ಯವರ್ತಿಗಳನ್ನಾಗಿ ಮಾಡಿಕೊಂಡು ದಂಧೆ ನಡೆಸುತ್ತಿದ್ದ. ಇತ್ತೀಚೆಗೆ ಬಾಗಲಕೋಟೆ ಜಿಲ್ಲೆಯ ವಿ.ಎಸ್‌.ಅರಗಿಶೆಟ್ಟಿ ಎಂಬವರಿಗೆ ಟ್ರಾಫಿಕ್‌ ಇನ್‌ಸ್ಪೆಕ್ಟರ್‌ ಹುದ್ದೆ ಕೊಡಿಸುವು ದಾಗಿ 11 ಲಕ್ಷರೂ.ವಂಚಿಸಿದ್ದರು. ಬೆಂಗಳೂರಿನಲ್ಲಿ ಬಿಡದಿ ಯ ಎಸ್ ಎಸ್ ಬಿ ಯಲ್ಲಿ ಎಸ್‌ಡಿಎ ಆಗಿರುವ ಅವರ ಸಹೋದರ ವೀರೇಶ್‌ ಮನೆಗೆ ಹೋಗಿ ವಾಪಸ್‌ ಹೋಗು ವಾವ ಆರೋಪಿ ಮಂಜುನಾಥ್‌ ಪರಿಚಯವಾಗಿದೆ.ಈ ವೇಳೆ ಆರೋಪಿ ತನಗೆ ಇಲಾಖೆಯಲ್ಲಿ ಹಿರಿಯ ಅಧಿಕಾರಿ ಗಳು ಪರಿಚಯವಿದ್ದಾರೆ ಎಂದು ಹೇಳಿ ಟ್ರಾಫಿಕ್‌ ಇನ್‌ಸ್ಪೆಕ್ಟರ್‌ ಹುದ್ದೆ ಕೊಡಿಸುವುದಾಗಿ ನಂಬಿಸಿದ್ದಾನೆ.

ನಂತರ 2018ರಲ್ಲಿ ಬೆಂಗಳೂರಿನ ಹೋಟೆಲ್‌ವೊಂದಕ್ಕೆ ಕರೆಸಿಕೊಂಡು 2019ರವರೆಗೆ ವಿವಿಧ ಹಂತದಲ್ಲಿ 11 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದಾನೆ. ಈ ಸಂಬಂಧ ಮಾಗಡಿ ರಸ್ತೆ ಠಾಣೆಯಲ್ಲಿ ದೂರು ನೀಡಿದ್ದರು.ಈ ಹಿನ್ನೆಲೆ ಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.ಮಂಜುನಾಥ್‌ ವಂಚಿಸುವುದನ್ನೇ ಉದ್ಯೋಗ ಮಾಡಿಕೊಂಡಿದ್ದಾನೆ.ಅದಕ್ಕಾಗಿ ಕಾರೊಂದನ್ನು ಖರೀದಿಸಿ ಅದಕ್ಕೆ ಕರ್ನಾಟಕ ಸರ್ಕಾರದ ನಾಮಫ‌ಲಕ ಹಾಕಿಕೊಂಡು ಉತ್ತರ ಕರ್ನಾಟಕದಲ್ಲಿ ತನ್ನ ಸ್ನೇಹಿತರ ಸುತ್ತಾಡುತ್ತಿದ್ದ.ಈ ವೇಳೆ ಪರಿಚಯವಾಗುವ ಮತ್ತು ಕರ್ತವ್ಯದ ವೇಳೆಯಲ್ಲಿ ಪರಿಚಯವಾಗುವ ಸಾರ್ವಜನಿಕ ರನ್ನು ಗುರಿಯಾಗಿಸಿಕೊಂಡು ಕೆಎಸ್‌ಆರ್‌ಟಿಸಿಯಲ್ಲಿ ಟ್ರಾಫಿಕ್‌ ಇನ್ಸ್‌ಪೆಕ್ಟರ್‌ ಉದ್ಯೋಗ ಕೊಡಿಸುವುದಾಗಿ ನಂಬಿಸುತ್ತಿದ್ದರು.

ಬಳಿಕ ಅವರಿಂದ ಹಣ ವಸೂಲಿ ಮಾಡಿಕೊಂಡು ನಾಪತ್ತೆಯಾಗುತ್ತಿದ್ದ. ಇದುವರೆಗೂ ಸುಮಾರು 500 ಮಂದಿಗೆ ಇದೇ ರೀತಿ ವಂಚಿಸಿದ್ದಾನೆ ಎಂದು ತಿಳಿದು ಬಂದಿದೆ ಸುಮಾರು 15ರಿಂದ 18 ಕೋಟಿ ರೂ. ವಂಚಿಸಿ ದ್ದಾನೆ ಎಂದು ಹೇಳಲಾಗುತ್ತಿದೆ ಎಂದು ಪೊಲೀಸರು ಹೇಳಿದರು.ಹಣ ವಸೂಲಿಗೆಂದೇ ಆರೋಪಿ ಸುಮಾರು 30 ಮಂದಿ ಸ್ನೇಹಿತರನ್ನು ಮಧ್ಯವರ್ತಿಗಳನ್ನಾಗಿ ನೇಮಿಸಿಕೊಂ ಡಿದ್ದಾನೆ.ಸರ್ಕಾರ ಮತ್ತು ಇಲಾಖೆಯಲ್ಲಿ ಹಿರಿಯ ಅಧಿಕಾರಿ ಗಳು ರಾಜಕೀಯ ಮುಖಂಡರು ಪರಿಚಯವಿದ್ದಾರೆ ಎಂದು ನಂಬಿಸುತ್ತಿದ್ದ.ನಂಬಿದ ಸಾರ್ವಜನಿಕರಿಂದ ಹಣ ವಸೂಲಿಗೆ ಮಧ್ಯವರ್ತಿಗಳನ್ನು ಕಳುಹಿಸುತ್ತಿದ್ದ.ನಂತರ ಸ್ನೇಹಿತರಿಗೆ ಇಂತಿಷ್ಟು ಹಣ ಕೊಡುತ್ತಿದ್ದ.ಆದರೆ ಆರೋಪಿ ಬಳಿ ಯಾವುದೇ ಆಸ್ತಿ-ಪಾಸ್ತಿ ಇಲ್ಲ.ಅಕ್ರಮವಾಗಿ ಸಂಪಾದಿಸಿದ ಹಣವನ್ನು ಮೋಜು-ಮಸ್ತಿ ಮಾಡಿ ಕಳೆದಿದ್ದಾನೆ ಎಂದು ಪೊಲೀಸರು ಹೇಳಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....