LIVE TV LocalCrimeNationalInternationalPoliticsEducationTechnologyEntertainmentSportsFeature
State News

ಇಬ್ಬರು ಶಿಕ್ಷಕರು ಅಮಾನತು - ಆ ಇಬ್ಬರು ಶಿಕ್ಷಕರಿಗೆ ಅಮಾನತು ಶಿಕ್ಷೆ ನೀಡಿದ ಜಿಲ್ಲಾಧಿಕಾರಿ.....

ವಿಜಯಪುರ -

ಲೋಕಸಭಾ ಚುನಾವಣೆಯ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿದ ಘಟನೆ ವಿಜಯಪುರ ದಲ್ಲಿ ನಡೆದಿದೆ ಹೌದು ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ನಿಯೋಜಿತರಾದರೂ ಆದೇಶ ಪಡೆಯದೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಇಬ್ಬರು ಶಿಕ್ಷಕರನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಚುನಾಣಾಧಿಕಾರಿ ಆದೇಶಿಸಿದ್ದಾರೆ

ಈ ಇಬ್ಬರು ಶಿಕ್ಷಕರನ್ನು ಸಸ್ಪೆಂಡ್ ಮಾಡಿ ಪ್ರತ್ಯೇಕ ಆದೇಶ ಹೊರಡಿಸಿರುವ ಜಿಲ್ಲಾ ಚುನಾವಣಾಧಿ ಕಾರಿಯೂ ಆಗಿರುವ ಜಿಲ್ಲಾಧಿಕಾರಿ ಭೂಬಾಲನ್, ಚುನಾವಣೆಯಂಥ ಮಹತ್ವದ ಕರ್ತವ್ಯವಾಗಿ ದ್ದರೂ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಸಸ್ಪೆಂಡ್ ಮಾಡಿದ್ದಾಗಿ ಆದೇಶದಲ್ಲಿ ವಿವರಿಸಿ ದ್ದಾರೆ

ಬಸವನಬಾಗೇವಾಡಿ ತಾಲೂಕಿನ ಅಬ್ಬಿಹಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಭರತ ಭೀಮಪ್ಪ ಗಡೇದ ಎಂಬ ಶಿಕ್ಷಕರೇ ಸಸ್ಪೆಂಡ್ ಆದವರು. ತಮ್ಮ ಶಾಲೆಯ ಮುಖ್ಯೋಪಾದ್ಯರು ಚುನಾವಣೆ ಕರ್ತವ್ಯಕ್ಕೆ ನಿಯೋಜಿತ ಆದೇಶ ಪಡೆಯುವಂತೆ ಸೂಚಿ ಸಿದರೂ ಭರತ ನಿರಾಕರಿಸಿದ್ದಾರೆ.

ಅಲ್ಲದೇ ಮೇಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಟ್ಟಿರುವ ಶಿಕ್ಷಕ ಭರತ, ಮೊಬೈಲ್ ಕರೆ ಮಾಡಿ ತಿಳಿಸಿದರೂ ತಾನು ಮಹಾರಾಷ್ಟ್ರದ ಪುಣೆಯಲ್ಲಿರುವುದಾಗಿ ಹೇಳಿ ಮೊಬೈಲ್ ಸ್ವೀಪ್ ಆಫ್ ಮಾಡಿದ್ದಾರೆ.

ಚುನಾವಣೆಯಂಥ ಕರ್ತವ್ಯದ ವಿಷಯದಲ್ಲಿ ನಿರ್ಲಕ್ಷ ತೋರಿದ ಕುರಿತು ಸಹಾಯಕ ಚುನಾವ ಣಾಧಿಕಾರಿ ನೀಡಿರುವ ವರದಿ ಆಧರಿಸಿ ಶಿಕ್ಷಕ ಭರತ ಅವರನ್ನು ಜಿಲ್ಲಾಧಿಕಾರಿ ಸಸ್ಪೆಂಡ್ ಮಾಡಿದ್ದಾರೆ. ಕೂಡಲೇ ಭರತ್ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ.

ಇನ್ನು ತಾಳಿಕೋಟೆ ತಾಲೂಕಿನ ಹಾಲಗೋಡಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ
ಆರ್.ಐ.ಮುಲ್ಲಾ ಏ.1 ರಂದು ಶಾಲೆಗೆ ಗೈರು ಹಾಜರಾಗಿದ್ದಲ್ಲದೇ, ಚುನಾವಣೆ ಆದೇಶದ ಪ್ರತಿ ಪಡೆಯುವಂತೆ ಸಿಆರ್‍ಪಿ ಐ.ಎಲ್.ಆಲಮೇಲ್ ಅವರು ನೀಡಿದ ಸೂಚನೆಯನ್ನೂ ನಿರ್ಲಕ್ಷಿಸಿದ್ದಾರೆ

ಅಲ್ಲದೇ ಮೊಬೈಲ್ ಸ್ವಿಚ್ ಆಫ್ ಮಾಡಿದ್ದು, ಚುನಾವಣೆಯಂಥ ಮಹತ್ವದ ಕರ್ತವ್ಯದ ವಿಷಯದಲ್ಲಿ ನಿರ್ಲಕ್ಷ ತೋರಿದ್ದರಿಂದ ಮುದ್ಧೇ ಬಿಹಾಳ ತಹಸೀಲ್ದಾರರ ವರದಿ ಆಧರಿಸಿ ಸೇವೆ ಯಿಂದ ಸಸ್ಪೆಂಡ್ ಮಾಡಿದ್ದಾಗಿ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಕೂಡಲೇ ಆರ್.ಐ.ಮುಲ್ಳಾ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ವಿಜಯಪುರ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....