LIVE TV LocalCrimeNationalInternationalPoliticsEducationTechnologyEntertainmentSportsFeature
State News

ನಿಮ್ಮ ಅಪ್ಪಾರ ಬಂದಿದ್ದಕ್ಕಿಂತ ಹೆಚ್ಚಾತು ನಾವು ನಿಮಗ ವೋಟ್ ಹಾಕ್ತೇವಿ ಚಿಂತಿ ಮಾಡಬ್ಯಾಡ್ರಿ - ತಂದೆಯ ಪರವಾಗಿ ವಿನಯ ಕುಲಕರ್ಣಿ ಪುತ್ರಿ ಭರ್ಜರಿ ಮತಭೇಟೆ.....

ಧಾರವಾಡ -

ನಿಮ್ಮ ಅಪ್ಪಾರ ಬಂದಿದ್ದಕ್ಕಿಂತ ಹೆಚ್ಚಾತು ನಾವು ನಿಮಗ ವೋಟ್ ಹಾಕ್ತೇವಿ ಚಿಂತಿ ಮಾಡಬ್ಯಾಡ್ರಿ ಇದು ಧಾರವಾಡ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿನಯ ಕುಲಕರ್ಣಿ ಪರವಾಗಿ ಮಗಳಿಗೆ ಮತದಾರರು ಹೇಳುತ್ತಿರುವ ಮಾತುಗಳು

ನೀವು ಇವತ್ತ ನಮ್ಮ ಮನಿ ಬಾಗಿಲಿಗಿ ಬಂದೀರಿ ನಿಮ್ಮ ಅಪ್ಪಾರ ಬಂದಿದ್ದಕ್ಕಿಂತ ಹೆಚ್ಚಾತು ನಾವು ನಿಮಗ ವೋಟ್ ಹಾಕ್ತೇವಿ ಚಿಂತಿ ಮಾಡಬ್ಯಾಡ್ರಿ ಆದರೆ ಅನ್ನೋ ಅಭಯ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಪುತ್ರಿ ವೈಶಾಲಿ ಕುಲಕರ್ಣಿ ಅವರಿಗೆ ಸಿಕ್ಕಿದೆ.

ಹೌದು ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಪರವಾಗಿ ಅವರ ಪುತ್ರಿ ವೈಶಾಲಿ ಅವರು ಧಾರವಾಡ ತಾಲೂಕಿನ ತಲವಾಯಿ ಗ್ರಾಮದಲ್ಲಿ ತಮ್ಮ ತಂದೆ ಪರ ಬಿರುಸಿನ ಪ್ರಚಾರ ನಡೆಸಿದರು.

ತಲವಾಯಿ ಗ್ರಾಮದಲ್ಲಿ ಹಿರಿಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಕರಪತ್ರ ನೀಡಿ ತಮ್ಮ ತಂದೆ ವಿನಯ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ವೈಶಾಲಿ ಅವರು ತಲವಾಯಿ ಗ್ರಾಮದ ಮನೆಯೊಂದಕ್ಕೆ ಹೋಗಿ ನಮ್ಮ ತಂದೆಯವರು ಬರಲು ಆಗಿಲ್ಲ ಅದಕ್ಕೆ ನಾವೇ ಬಂದು ಮತ ಕೇಳುತ್ತಿದ್ದೇವೆ ನಮಗೆ ಮತ ನೀಡಿ ಎಂದು ಮನವಿ ಮಾಡಿದರು.

ಮಹಿಳೆಯೊಬ್ಬರು ನಿಮ್ಮ ತಂದೆ ಬಂದಿದ್ದಕ್ಕಿಂತ ಹೆಚ್ಚಾಯ್ತು ನಾವು ನಿಮಗೇ ಮತ ಹಾಕ್ತೀವಿ ಅಂತಾ ಅಭಯ ನೀಡಿದರು.ಈ ವೇಳೆ ಮಾತ ನಾಡಿದ ವೈಶಾಲಿ ಕುಲಕರ್ಣಿ ಈ ಬಾರಿ ನಮ್ಮ ತಂದೆಯವರಾದ ವಿನಯ್ ಕುಲಕರ್ಣಿ ಅವರು 50 ಸಾವಿರ ಮತಗಳ ಅಂತರದಿಂದ ಗೆದ್ದೇ ಗೆಲ್ಲುತ್ತಾರೆ.

ಅದರಲ್ಲಿ ಯಾವುದೇ ಸಂದೇಹವಿಲ್ಲ. ನಾವು ಹೋದ ಕಡೆಗಳಲ್ಲೆಲ್ಲ ಉತ್ತಮ ಜನ ಬೆಂಬಲ ವ್ಯಕ್ತವಾಗುತ್ತಿದೆ. ಹಿರಿಯರು ಪಕ್ಷದ ಕಾರ್ಯಕರ್ತ ರಿಂದ ಉತ್ತಮ ಜನಸ್ಪಂದನೆ ಸಿಗುತ್ತಿದೆ. ನಮ್ಮ ತಂದೆಯವರು ಸಚಿವರಿದ್ದ ಸಂದರ್ಭದಲ್ಲಿ ಪ್ರತಿ ತಿಂಗಳು ಉದ್ಯೋಗ ಮೇಳ ಮಾಡಿ ಯುವಕರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡುತ್ತಿದ್ದರು. ಅಂತಹ ಕೆಲಸಗಳು ಬಿಜೆಪಿ ಶಾಸಕರ ಅವಧಿ ಯಲ್ಲಿ ಆಗಲಿಲ್ಲ ಎಂದರು.ಒಟ್ಟಾರೆ ವೈಶಾಲಿ ಕೂಡ ತಮ್ಮ ತಂದೆ ಪರವಾಗಿ ಬಿರುಸಿನ ಪ್ರಚಾರ ನಡೆಸಿದ್ದು, ಅವರಿಗೂ ಉತ್ತಮ ಜನ ಸ್ಪಂದನೆ ವ್ಯಕ್ತವಾಗಿದೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....