LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವೀರಶೈವ ಲಿಂಗಾಯತ ,ಮರಾಠ ನಿಗಮಕ್ಕೇ ಸ್ವಾಗತ – ಧಾರವಾಡದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

ಧಾರವಾಡ

ವೀರಶೈವ ಲಿಂಗಾಯತ ಮರಾಠ ನಿಗಮಕ್ಕೇ ಸ್ವಾಗತಿಸಿ ಧಾರವಾಡದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಣೆ ಮಾಡಲಾಯಿತು. ವೀರಶೈವ ಮತ್ತು ಲಿಂಗಾಯತ ಅಭಿವೃದ್ದಿ ನಿಗಮಕ್ಕೇ ಮುಖ್ಯಮಂತ್ರಿ ಆದೇಶ ನೀಡುತ್ತಿದ್ದಂತೆ ಇತ್ತ ಧಾರವಾಡದಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಎರಡು ನಿಮಗದ ಆರಂಭಕ್ಕೇ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಸ್ವಾಗತಿಸುವ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಮಾಡಿದರು. ನಗರದ ಜುಬಲಿ ವೃತ್ತದಲ್ಲಿನ ಬಸವೇಶ್ವರ ಪ್ರತಿಮೆಗೆ ಮಾಜಿ ಶಾಸಕಿ ಸೀಮಾ ಮಸೂತಿ ನೇತತ್ವದಲ್ಲಿ ಮಾಲಾರ್ಪಣೆ ಮಾಡಿ ವಿಜಯೋತ್ಸವವನ್ನು ಆಚರಣೆ ಮಾಡಲಾಯಿತು.

ಮೊದಲು ವಿಶ್ವಗುರು ಬಸವೇಶ್ವರರಿಗೆ ಸಾಮೂಹಿಕವಾಗಿ ಮಾಲಾರ್ಪಣೆ ಮಾಡಿದರು.ನಂತರ ಇತ್ತ ಶಿವಾಜಿ ವೃತ್ತದಲ್ಲಿರುವ ಶಿವಾಜಿ ಪ್ರತಿಮೆಗೆ ಕೂಡಾ ಮಾಲಾರ್ಪಣೆ ಮಾಡಿದರು. ಅಲ್ಲೂ ಕೂಡಾ ನಂತರ ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಣೆ ಮಾಡಲಾಯಿತು.

ಇದೇ ವೇಳೆ ಸಿಹಿ ತಿನ್ನಿಸಿ ಸಂಬ್ರಮಿಸಿ ಮುಖ್ಯಮಂತ್ರಿ ನಿರ್ಧಾರವನ್ನು ಸ್ವಾಗತಿಸಿದ್ರು.ಇನ್ನೂ ಈ ಒಂದು ಕಾರ್ಯಕ್ರಮವು ಮಾಜಿ ಶಾಸಕಿ ಸೀಮಾ ಮಸೂತಿ ನೇತ್ರತ್ವದಲ್ಲಿ ನಡೆದಿದ್ದು ಇವರೊಂದಿಗೆ ಸಂಗನಗೌಡ ರಾಮನಗೌಡರ ,ರುದ್ರಪ್ಪ ಹರಿವಾನ, ಸುನೀನ ಮೋರೆ, ಶಂಕರ ಶೇಳಕೆ,ಮಹೇಶ ಯಲಿಗಾರ,ಶಿವು ಬೆಳಾರದ ಶಂಕರ ಕೋಮಾರದೇಸಾಯಿ ,ರಾಜು ಜಿವನ್ನವರ

ಸಂಬಾಜೀ ಜಾಧವ ,ಯಲ್ಲಪ್ಪ ಜಾನೂಕನವರ ,ಮಲ್ಲಿಕಾರ್ಜನ ಗೋಕಾವಿ ,ವಿಕ್ರಮ ಹುಣಸಿಕಟ್ಟಿ, ವೀರನಗೌಡ ಪಾಟೀಲ, ಸಿದ್ದನಗೌಡ ಪಾಟೀಲ ,ಈರಯ್ಯ ಹಿರೇಮಠ, ಗೋಮಿಂದ ಮಮ್ಮಿಗಟ್ಟಿ, ಸೇರಿದಂತೆ ಹಲವರು ಹಾಗೇ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಕಾರ್ಯಕರ್ತರು ಇತ್ತ ಮರಾಠ ಸಮಾಜದ ಹಿರಿಯರು ಮುಖಂಡರು ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....